ಬ್ರೇಕಿಂಗ್ ನ್ಯೂಸ್
26-09-22 11:33 am Mangalore Correspondent ಕರಾವಳಿ
ಉಳ್ಳಾಲ, ಸೆ.26: ಸೆಪ್ಟೆಂಬರ್ ಒಂದೇ ತಿಂಗಳಲ್ಲಿ ಕುಂಪಲದ ಮೂರು ರಿಕ್ಷಾ ಚಾಲಕರು ಅಕಾಲಿಕ ಸಾವನ್ನಪ್ಪಿದ್ದು, ಸರಣಿ ಸಾವಿನಿಂದಾಗಿ ಮತ್ತೆ ಕುಂಪಲ ಪ್ರದೇಶದ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.
ನಿನ್ನೆ ರಾತ್ರಿ ಕುಂಪಲ ಮೂರುಕಟ್ಟೆ ನಿವಾಸಿ ಆಟೋ ಚಾಲಕ ಜಯಪ್ರಕಾಶ್(42) ಯಾನೆ ಬಾಚ ಅವರು ಅಲ್ಪ ಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಜಯಪ್ರಕಾಶ್ ಅವರನ್ನು ಶುಕ್ರವಾರ ಆಸ್ಪತ್ರೆಗೆ ಸೇರಿಸಲಾಗಿದ್ದು ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ಜಯಪ್ರಕಾಶ್ ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ವಿಜಯ್ ಪ್ರಕಾಶ್ (ಪಕ್ಕು) ಅವರ ಅವಳಿ ಸಹೋದರನಾಗಿದ್ದರು. ಅವರು ತಂದೆ, ತಾಯಿ ಸಹೋದರರು, ಪತ್ನಿ , ಮಗಳನ್ನ ಅಗಲಿದ್ದಾರೆ.
ಸೆ.3ರಂದು ಕುಂಪಲ ಕೃಷ್ಣ ನಗರ ನಿವಾಸಿ ಹಿಂದೂ ಯುವ ಸೇನೆಯ ಪ್ರಮುಖರಾದ ಜಯಂತ್ ಎಸ್ ಕುಂಪಲ(48) ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಸೆ.13ರಂದು ಕುಂಪಲ, ಬಲ್ಯ ನಿವಾಸಿ ಧನಂಜಯ ರಾವ್ (53) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹೀಗೆ ಅಕಾಲಿಕವಾಗಿ ಸಾವನ್ನಪ್ಪಿದ ಮೂವರು ಕೂಡ ಆಟೋ ಚಲಾಯಿಸಿ ಕುಟುಂಬವನ್ನ ಸಾಕುತ್ತಿದ್ದರಲ್ಲದೆ ಸಂಘ, ಸಂಸ್ಥೆಗಳಲ್ಲಿ ಗುರುತಿಸಿ ಜನಾನುರಾಗಿಯಾಗಿದ್ದರು.
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ಬಳಿಕ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಇದೀಗ ಒಂದೇ ತಿಂಗಳಲ್ಲಿ ಮೂರು ಆಟೋ ಚಾಲಕರು ಅಕಾಲಿಕ ಸಾವನ್ನಪ್ಪಿರುವುದು ಕುಂಪಲದಲ್ಲಿ ಸರಣಿ ಸಾವಿನ ಬಗ್ಗೆ ಆತಂಕ ಮೂಡಿಸಿದ್ದು ಜನರನ್ನು ಗಢ ಗಢ ನಲುಗಿಸಿದೆ.
Mangalore Three auto drivers die in span of just one month in Kumpala.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm