ಬ್ರೇಕಿಂಗ್ ನ್ಯೂಸ್
26-09-22 11:33 am Mangalore Correspondent ಕರಾವಳಿ
ಉಳ್ಳಾಲ, ಸೆ.26: ಸೆಪ್ಟೆಂಬರ್ ಒಂದೇ ತಿಂಗಳಲ್ಲಿ ಕುಂಪಲದ ಮೂರು ರಿಕ್ಷಾ ಚಾಲಕರು ಅಕಾಲಿಕ ಸಾವನ್ನಪ್ಪಿದ್ದು, ಸರಣಿ ಸಾವಿನಿಂದಾಗಿ ಮತ್ತೆ ಕುಂಪಲ ಪ್ರದೇಶದ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.
ನಿನ್ನೆ ರಾತ್ರಿ ಕುಂಪಲ ಮೂರುಕಟ್ಟೆ ನಿವಾಸಿ ಆಟೋ ಚಾಲಕ ಜಯಪ್ರಕಾಶ್(42) ಯಾನೆ ಬಾಚ ಅವರು ಅಲ್ಪ ಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಜಯಪ್ರಕಾಶ್ ಅವರನ್ನು ಶುಕ್ರವಾರ ಆಸ್ಪತ್ರೆಗೆ ಸೇರಿಸಲಾಗಿದ್ದು ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ಜಯಪ್ರಕಾಶ್ ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ವಿಜಯ್ ಪ್ರಕಾಶ್ (ಪಕ್ಕು) ಅವರ ಅವಳಿ ಸಹೋದರನಾಗಿದ್ದರು. ಅವರು ತಂದೆ, ತಾಯಿ ಸಹೋದರರು, ಪತ್ನಿ , ಮಗಳನ್ನ ಅಗಲಿದ್ದಾರೆ.
ಸೆ.3ರಂದು ಕುಂಪಲ ಕೃಷ್ಣ ನಗರ ನಿವಾಸಿ ಹಿಂದೂ ಯುವ ಸೇನೆಯ ಪ್ರಮುಖರಾದ ಜಯಂತ್ ಎಸ್ ಕುಂಪಲ(48) ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಸೆ.13ರಂದು ಕುಂಪಲ, ಬಲ್ಯ ನಿವಾಸಿ ಧನಂಜಯ ರಾವ್ (53) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹೀಗೆ ಅಕಾಲಿಕವಾಗಿ ಸಾವನ್ನಪ್ಪಿದ ಮೂವರು ಕೂಡ ಆಟೋ ಚಲಾಯಿಸಿ ಕುಟುಂಬವನ್ನ ಸಾಕುತ್ತಿದ್ದರಲ್ಲದೆ ಸಂಘ, ಸಂಸ್ಥೆಗಳಲ್ಲಿ ಗುರುತಿಸಿ ಜನಾನುರಾಗಿಯಾಗಿದ್ದರು.
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ಬಳಿಕ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಇದೀಗ ಒಂದೇ ತಿಂಗಳಲ್ಲಿ ಮೂರು ಆಟೋ ಚಾಲಕರು ಅಕಾಲಿಕ ಸಾವನ್ನಪ್ಪಿರುವುದು ಕುಂಪಲದಲ್ಲಿ ಸರಣಿ ಸಾವಿನ ಬಗ್ಗೆ ಆತಂಕ ಮೂಡಿಸಿದ್ದು ಜನರನ್ನು ಗಢ ಗಢ ನಲುಗಿಸಿದೆ.
Mangalore Three auto drivers die in span of just one month in Kumpala.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm