ಬ್ರೇಕಿಂಗ್ ನ್ಯೂಸ್
26-09-22 11:33 am Mangalore Correspondent ಕರಾವಳಿ
ಉಳ್ಳಾಲ, ಸೆ.26: ಸೆಪ್ಟೆಂಬರ್ ಒಂದೇ ತಿಂಗಳಲ್ಲಿ ಕುಂಪಲದ ಮೂರು ರಿಕ್ಷಾ ಚಾಲಕರು ಅಕಾಲಿಕ ಸಾವನ್ನಪ್ಪಿದ್ದು, ಸರಣಿ ಸಾವಿನಿಂದಾಗಿ ಮತ್ತೆ ಕುಂಪಲ ಪ್ರದೇಶದ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.
ನಿನ್ನೆ ರಾತ್ರಿ ಕುಂಪಲ ಮೂರುಕಟ್ಟೆ ನಿವಾಸಿ ಆಟೋ ಚಾಲಕ ಜಯಪ್ರಕಾಶ್(42) ಯಾನೆ ಬಾಚ ಅವರು ಅಲ್ಪ ಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಜಯಪ್ರಕಾಶ್ ಅವರನ್ನು ಶುಕ್ರವಾರ ಆಸ್ಪತ್ರೆಗೆ ಸೇರಿಸಲಾಗಿದ್ದು ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ಜಯಪ್ರಕಾಶ್ ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ವಿಜಯ್ ಪ್ರಕಾಶ್ (ಪಕ್ಕು) ಅವರ ಅವಳಿ ಸಹೋದರನಾಗಿದ್ದರು. ಅವರು ತಂದೆ, ತಾಯಿ ಸಹೋದರರು, ಪತ್ನಿ , ಮಗಳನ್ನ ಅಗಲಿದ್ದಾರೆ.
ಸೆ.3ರಂದು ಕುಂಪಲ ಕೃಷ್ಣ ನಗರ ನಿವಾಸಿ ಹಿಂದೂ ಯುವ ಸೇನೆಯ ಪ್ರಮುಖರಾದ ಜಯಂತ್ ಎಸ್ ಕುಂಪಲ(48) ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಸೆ.13ರಂದು ಕುಂಪಲ, ಬಲ್ಯ ನಿವಾಸಿ ಧನಂಜಯ ರಾವ್ (53) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹೀಗೆ ಅಕಾಲಿಕವಾಗಿ ಸಾವನ್ನಪ್ಪಿದ ಮೂವರು ಕೂಡ ಆಟೋ ಚಲಾಯಿಸಿ ಕುಟುಂಬವನ್ನ ಸಾಕುತ್ತಿದ್ದರಲ್ಲದೆ ಸಂಘ, ಸಂಸ್ಥೆಗಳಲ್ಲಿ ಗುರುತಿಸಿ ಜನಾನುರಾಗಿಯಾಗಿದ್ದರು.
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ಬಳಿಕ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಇದೀಗ ಒಂದೇ ತಿಂಗಳಲ್ಲಿ ಮೂರು ಆಟೋ ಚಾಲಕರು ಅಕಾಲಿಕ ಸಾವನ್ನಪ್ಪಿರುವುದು ಕುಂಪಲದಲ್ಲಿ ಸರಣಿ ಸಾವಿನ ಬಗ್ಗೆ ಆತಂಕ ಮೂಡಿಸಿದ್ದು ಜನರನ್ನು ಗಢ ಗಢ ನಲುಗಿಸಿದೆ.
Mangalore Three auto drivers die in span of just one month in Kumpala.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm