ಬ್ರೇಕಿಂಗ್ ನ್ಯೂಸ್
26-09-22 10:17 pm Mangalore Correspondent ಕರಾವಳಿ
ಮಂಗಳೂರು, ಸೆ.26 : ಐದು ತಿಂಗಳಿನಿಂದ ವೇತನ ಪಾವತಿಸದೆ ಸತಾಯಿಸುತ್ತಿರುವ ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶಗೊಂಡ ದ.ಕ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ಹಂಪನಕಟ್ಟೆಯ ಮಿನಿ ವಿಧಾನಸೌಧದ ಮುಂಭಾಗ ಧರಣಿ ನಡೆಸಿದ್ದಾರೆ.
ಬಾಕಿ ವೇತನ ತಕ್ಷಣ ಬಿಡುಗಡೆಗೊಳಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಉದ್ಯೋಗ ಭದ್ರತೆ ನೀಡಬೇಕು, ತಿಂಗಳಿಗೆ ಕನಿಷ್ಟ 22,000 ರೂಪಾಯಿ ವೇತನ ನೀಡುವುದು, ಮಹಿಳಾ ಶಿಕ್ಷಕಿಯರಿಗೆ ಹೆರಿಗೆ ರಜೆ ಸೌಲಭ್ಯ ಒದಗಿಸುವುದು, ವರ್ಷದ 12 ತಿಂಗಳು ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಳಗ್ಗಿನಿಂದ ಸಂಜೆಯ ವರಗೂ ಧರಣಿ ನಡೆದಿದ್ದು ಜಿಲ್ಲೆಯ ವಿವಿಧೆಡೆಯ 300 ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಪಾಲ್ಗೊಂಡಿದ್ದರು.


ಈ ನಡುವೆ, ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯ ಆಯುಕ್ತರು ಮಂಗಳೂರು ತಾಲೂಕು ವ್ಯಾಪ್ತಿಯ ಇಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಧರಣಿ ನಿರತರೊಂದಿಗೆ ಮಾತುಕತೆಗೆ ಕಳುಹಿಸಿಕೊಟ್ಟರು. 'ಬಾಕಿ ವೇತನ ಈಗಾಗಲೇ ಬಿಡುಗಡೆಗೊಂಡಿದೆ. ಎರಡು ದಿನಗಳಲ್ಲಿ ಶಿಕ್ಷಕರ ಖಾತೆಗೆ ಜಮಾ ಮಾಡಲಾಗುವುದು' ಎಂದು ಭರವಸೆ ನೀಡಿದರು. ಎರಡು ದಿನಗಳಲ್ಲಿ ಬಾಕಿ ವೇತನ ಸಂದಾಯ ಆಗದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ಧಿಷ್ಟ ಧರಣಿ ನಡೆಸುವ ತೀರ್ಮಾನದೊಂದಿಗೆ ಧರಣಿ ನಡೆಸುವ ಬಗ್ಗೆ ನಿರ್ಧಾರಕ್ಕೆ ಬರಲಾಗಿದೆ.


ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮುಖಂಡರಾದ ಸಂತೋಷ್ ಬಜಾಲ್, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಕಾಂಗ್ರೆಸ್ ನಾಯಕ ಮಿಥುನ್ ರೈ, ಅತಿಥಿ ಶಿಕ್ಷಕರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷೆ ಜಯಮಾಲ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಚಂದ್ರಿಕಾ, ಕಾರ್ಯದರ್ಶಿ ಚಿತ್ರಲೇಖ ಕೆ, ಮುಖಂಡರಾದ ರೇವತಿ ಬಂಟ್ವಾಳ, ಸೌಮ್ಯ ಕಡಬ, ಕಾವ್ಯ ಸುಳ್ಯ, ಕವಿತಾ ನಾಯಕ್, ಜ್ಯೋತಿ ಮುಂತಾದವರು ಧರಣಿಯ ನೇತೃತ್ವ ವಹಿಸಿದ್ದರು.
Guest lectures protest in Mangalore for no increase in salary since five months.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm