ಬ್ರೇಕಿಂಗ್ ನ್ಯೂಸ್
26-09-22 10:17 pm Mangalore Correspondent ಕರಾವಳಿ
ಮಂಗಳೂರು, ಸೆ.26 : ಐದು ತಿಂಗಳಿನಿಂದ ವೇತನ ಪಾವತಿಸದೆ ಸತಾಯಿಸುತ್ತಿರುವ ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶಗೊಂಡ ದ.ಕ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ಹಂಪನಕಟ್ಟೆಯ ಮಿನಿ ವಿಧಾನಸೌಧದ ಮುಂಭಾಗ ಧರಣಿ ನಡೆಸಿದ್ದಾರೆ.
ಬಾಕಿ ವೇತನ ತಕ್ಷಣ ಬಿಡುಗಡೆಗೊಳಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಉದ್ಯೋಗ ಭದ್ರತೆ ನೀಡಬೇಕು, ತಿಂಗಳಿಗೆ ಕನಿಷ್ಟ 22,000 ರೂಪಾಯಿ ವೇತನ ನೀಡುವುದು, ಮಹಿಳಾ ಶಿಕ್ಷಕಿಯರಿಗೆ ಹೆರಿಗೆ ರಜೆ ಸೌಲಭ್ಯ ಒದಗಿಸುವುದು, ವರ್ಷದ 12 ತಿಂಗಳು ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಳಗ್ಗಿನಿಂದ ಸಂಜೆಯ ವರಗೂ ಧರಣಿ ನಡೆದಿದ್ದು ಜಿಲ್ಲೆಯ ವಿವಿಧೆಡೆಯ 300 ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಪಾಲ್ಗೊಂಡಿದ್ದರು.


ಈ ನಡುವೆ, ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯ ಆಯುಕ್ತರು ಮಂಗಳೂರು ತಾಲೂಕು ವ್ಯಾಪ್ತಿಯ ಇಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಧರಣಿ ನಿರತರೊಂದಿಗೆ ಮಾತುಕತೆಗೆ ಕಳುಹಿಸಿಕೊಟ್ಟರು. 'ಬಾಕಿ ವೇತನ ಈಗಾಗಲೇ ಬಿಡುಗಡೆಗೊಂಡಿದೆ. ಎರಡು ದಿನಗಳಲ್ಲಿ ಶಿಕ್ಷಕರ ಖಾತೆಗೆ ಜಮಾ ಮಾಡಲಾಗುವುದು' ಎಂದು ಭರವಸೆ ನೀಡಿದರು. ಎರಡು ದಿನಗಳಲ್ಲಿ ಬಾಕಿ ವೇತನ ಸಂದಾಯ ಆಗದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ಧಿಷ್ಟ ಧರಣಿ ನಡೆಸುವ ತೀರ್ಮಾನದೊಂದಿಗೆ ಧರಣಿ ನಡೆಸುವ ಬಗ್ಗೆ ನಿರ್ಧಾರಕ್ಕೆ ಬರಲಾಗಿದೆ.


ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮುಖಂಡರಾದ ಸಂತೋಷ್ ಬಜಾಲ್, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಕಾಂಗ್ರೆಸ್ ನಾಯಕ ಮಿಥುನ್ ರೈ, ಅತಿಥಿ ಶಿಕ್ಷಕರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷೆ ಜಯಮಾಲ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಚಂದ್ರಿಕಾ, ಕಾರ್ಯದರ್ಶಿ ಚಿತ್ರಲೇಖ ಕೆ, ಮುಖಂಡರಾದ ರೇವತಿ ಬಂಟ್ವಾಳ, ಸೌಮ್ಯ ಕಡಬ, ಕಾವ್ಯ ಸುಳ್ಯ, ಕವಿತಾ ನಾಯಕ್, ಜ್ಯೋತಿ ಮುಂತಾದವರು ಧರಣಿಯ ನೇತೃತ್ವ ವಹಿಸಿದ್ದರು.
Guest lectures protest in Mangalore for no increase in salary since five months.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am