ಬ್ರೇಕಿಂಗ್ ನ್ಯೂಸ್
26-09-22 10:17 pm Mangalore Correspondent ಕರಾವಳಿ
ಮಂಗಳೂರು, ಸೆ.26 : ಐದು ತಿಂಗಳಿನಿಂದ ವೇತನ ಪಾವತಿಸದೆ ಸತಾಯಿಸುತ್ತಿರುವ ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶಗೊಂಡ ದ.ಕ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ಹಂಪನಕಟ್ಟೆಯ ಮಿನಿ ವಿಧಾನಸೌಧದ ಮುಂಭಾಗ ಧರಣಿ ನಡೆಸಿದ್ದಾರೆ.
ಬಾಕಿ ವೇತನ ತಕ್ಷಣ ಬಿಡುಗಡೆಗೊಳಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಉದ್ಯೋಗ ಭದ್ರತೆ ನೀಡಬೇಕು, ತಿಂಗಳಿಗೆ ಕನಿಷ್ಟ 22,000 ರೂಪಾಯಿ ವೇತನ ನೀಡುವುದು, ಮಹಿಳಾ ಶಿಕ್ಷಕಿಯರಿಗೆ ಹೆರಿಗೆ ರಜೆ ಸೌಲಭ್ಯ ಒದಗಿಸುವುದು, ವರ್ಷದ 12 ತಿಂಗಳು ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಳಗ್ಗಿನಿಂದ ಸಂಜೆಯ ವರಗೂ ಧರಣಿ ನಡೆದಿದ್ದು ಜಿಲ್ಲೆಯ ವಿವಿಧೆಡೆಯ 300 ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಪಾಲ್ಗೊಂಡಿದ್ದರು.


ಈ ನಡುವೆ, ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯ ಆಯುಕ್ತರು ಮಂಗಳೂರು ತಾಲೂಕು ವ್ಯಾಪ್ತಿಯ ಇಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಧರಣಿ ನಿರತರೊಂದಿಗೆ ಮಾತುಕತೆಗೆ ಕಳುಹಿಸಿಕೊಟ್ಟರು. 'ಬಾಕಿ ವೇತನ ಈಗಾಗಲೇ ಬಿಡುಗಡೆಗೊಂಡಿದೆ. ಎರಡು ದಿನಗಳಲ್ಲಿ ಶಿಕ್ಷಕರ ಖಾತೆಗೆ ಜಮಾ ಮಾಡಲಾಗುವುದು' ಎಂದು ಭರವಸೆ ನೀಡಿದರು. ಎರಡು ದಿನಗಳಲ್ಲಿ ಬಾಕಿ ವೇತನ ಸಂದಾಯ ಆಗದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ಧಿಷ್ಟ ಧರಣಿ ನಡೆಸುವ ತೀರ್ಮಾನದೊಂದಿಗೆ ಧರಣಿ ನಡೆಸುವ ಬಗ್ಗೆ ನಿರ್ಧಾರಕ್ಕೆ ಬರಲಾಗಿದೆ.


ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮುಖಂಡರಾದ ಸಂತೋಷ್ ಬಜಾಲ್, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಕಾಂಗ್ರೆಸ್ ನಾಯಕ ಮಿಥುನ್ ರೈ, ಅತಿಥಿ ಶಿಕ್ಷಕರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷೆ ಜಯಮಾಲ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಚಂದ್ರಿಕಾ, ಕಾರ್ಯದರ್ಶಿ ಚಿತ್ರಲೇಖ ಕೆ, ಮುಖಂಡರಾದ ರೇವತಿ ಬಂಟ್ವಾಳ, ಸೌಮ್ಯ ಕಡಬ, ಕಾವ್ಯ ಸುಳ್ಯ, ಕವಿತಾ ನಾಯಕ್, ಜ್ಯೋತಿ ಮುಂತಾದವರು ಧರಣಿಯ ನೇತೃತ್ವ ವಹಿಸಿದ್ದರು.
Guest lectures protest in Mangalore for no increase in salary since five months.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm