ಬ್ರೇಕಿಂಗ್ ನ್ಯೂಸ್
26-09-22 10:17 pm Mangalore Correspondent ಕರಾವಳಿ
ಮಂಗಳೂರು, ಸೆ.26 : ಐದು ತಿಂಗಳಿನಿಂದ ವೇತನ ಪಾವತಿಸದೆ ಸತಾಯಿಸುತ್ತಿರುವ ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶಗೊಂಡ ದ.ಕ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ಹಂಪನಕಟ್ಟೆಯ ಮಿನಿ ವಿಧಾನಸೌಧದ ಮುಂಭಾಗ ಧರಣಿ ನಡೆಸಿದ್ದಾರೆ.
ಬಾಕಿ ವೇತನ ತಕ್ಷಣ ಬಿಡುಗಡೆಗೊಳಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಉದ್ಯೋಗ ಭದ್ರತೆ ನೀಡಬೇಕು, ತಿಂಗಳಿಗೆ ಕನಿಷ್ಟ 22,000 ರೂಪಾಯಿ ವೇತನ ನೀಡುವುದು, ಮಹಿಳಾ ಶಿಕ್ಷಕಿಯರಿಗೆ ಹೆರಿಗೆ ರಜೆ ಸೌಲಭ್ಯ ಒದಗಿಸುವುದು, ವರ್ಷದ 12 ತಿಂಗಳು ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಳಗ್ಗಿನಿಂದ ಸಂಜೆಯ ವರಗೂ ಧರಣಿ ನಡೆದಿದ್ದು ಜಿಲ್ಲೆಯ ವಿವಿಧೆಡೆಯ 300 ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಪಾಲ್ಗೊಂಡಿದ್ದರು.
ಈ ನಡುವೆ, ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯ ಆಯುಕ್ತರು ಮಂಗಳೂರು ತಾಲೂಕು ವ್ಯಾಪ್ತಿಯ ಇಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಧರಣಿ ನಿರತರೊಂದಿಗೆ ಮಾತುಕತೆಗೆ ಕಳುಹಿಸಿಕೊಟ್ಟರು. 'ಬಾಕಿ ವೇತನ ಈಗಾಗಲೇ ಬಿಡುಗಡೆಗೊಂಡಿದೆ. ಎರಡು ದಿನಗಳಲ್ಲಿ ಶಿಕ್ಷಕರ ಖಾತೆಗೆ ಜಮಾ ಮಾಡಲಾಗುವುದು' ಎಂದು ಭರವಸೆ ನೀಡಿದರು. ಎರಡು ದಿನಗಳಲ್ಲಿ ಬಾಕಿ ವೇತನ ಸಂದಾಯ ಆಗದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ಧಿಷ್ಟ ಧರಣಿ ನಡೆಸುವ ತೀರ್ಮಾನದೊಂದಿಗೆ ಧರಣಿ ನಡೆಸುವ ಬಗ್ಗೆ ನಿರ್ಧಾರಕ್ಕೆ ಬರಲಾಗಿದೆ.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮುಖಂಡರಾದ ಸಂತೋಷ್ ಬಜಾಲ್, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಕಾಂಗ್ರೆಸ್ ನಾಯಕ ಮಿಥುನ್ ರೈ, ಅತಿಥಿ ಶಿಕ್ಷಕರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷೆ ಜಯಮಾಲ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಚಂದ್ರಿಕಾ, ಕಾರ್ಯದರ್ಶಿ ಚಿತ್ರಲೇಖ ಕೆ, ಮುಖಂಡರಾದ ರೇವತಿ ಬಂಟ್ವಾಳ, ಸೌಮ್ಯ ಕಡಬ, ಕಾವ್ಯ ಸುಳ್ಯ, ಕವಿತಾ ನಾಯಕ್, ಜ್ಯೋತಿ ಮುಂತಾದವರು ಧರಣಿಯ ನೇತೃತ್ವ ವಹಿಸಿದ್ದರು.
Guest lectures protest in Mangalore for no increase in salary since five months.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm