ಬ್ರೇಕಿಂಗ್ ನ್ಯೂಸ್
26-09-22 10:17 pm Mangalore Correspondent ಕರಾವಳಿ
ಮಂಗಳೂರು, ಸೆ.26 : ಐದು ತಿಂಗಳಿನಿಂದ ವೇತನ ಪಾವತಿಸದೆ ಸತಾಯಿಸುತ್ತಿರುವ ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶಗೊಂಡ ದ.ಕ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ಹಂಪನಕಟ್ಟೆಯ ಮಿನಿ ವಿಧಾನಸೌಧದ ಮುಂಭಾಗ ಧರಣಿ ನಡೆಸಿದ್ದಾರೆ.
ಬಾಕಿ ವೇತನ ತಕ್ಷಣ ಬಿಡುಗಡೆಗೊಳಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಉದ್ಯೋಗ ಭದ್ರತೆ ನೀಡಬೇಕು, ತಿಂಗಳಿಗೆ ಕನಿಷ್ಟ 22,000 ರೂಪಾಯಿ ವೇತನ ನೀಡುವುದು, ಮಹಿಳಾ ಶಿಕ್ಷಕಿಯರಿಗೆ ಹೆರಿಗೆ ರಜೆ ಸೌಲಭ್ಯ ಒದಗಿಸುವುದು, ವರ್ಷದ 12 ತಿಂಗಳು ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಳಗ್ಗಿನಿಂದ ಸಂಜೆಯ ವರಗೂ ಧರಣಿ ನಡೆದಿದ್ದು ಜಿಲ್ಲೆಯ ವಿವಿಧೆಡೆಯ 300 ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಪಾಲ್ಗೊಂಡಿದ್ದರು.


ಈ ನಡುವೆ, ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯ ಆಯುಕ್ತರು ಮಂಗಳೂರು ತಾಲೂಕು ವ್ಯಾಪ್ತಿಯ ಇಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಧರಣಿ ನಿರತರೊಂದಿಗೆ ಮಾತುಕತೆಗೆ ಕಳುಹಿಸಿಕೊಟ್ಟರು. 'ಬಾಕಿ ವೇತನ ಈಗಾಗಲೇ ಬಿಡುಗಡೆಗೊಂಡಿದೆ. ಎರಡು ದಿನಗಳಲ್ಲಿ ಶಿಕ್ಷಕರ ಖಾತೆಗೆ ಜಮಾ ಮಾಡಲಾಗುವುದು' ಎಂದು ಭರವಸೆ ನೀಡಿದರು. ಎರಡು ದಿನಗಳಲ್ಲಿ ಬಾಕಿ ವೇತನ ಸಂದಾಯ ಆಗದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ಧಿಷ್ಟ ಧರಣಿ ನಡೆಸುವ ತೀರ್ಮಾನದೊಂದಿಗೆ ಧರಣಿ ನಡೆಸುವ ಬಗ್ಗೆ ನಿರ್ಧಾರಕ್ಕೆ ಬರಲಾಗಿದೆ.


ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮುಖಂಡರಾದ ಸಂತೋಷ್ ಬಜಾಲ್, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಕಾಂಗ್ರೆಸ್ ನಾಯಕ ಮಿಥುನ್ ರೈ, ಅತಿಥಿ ಶಿಕ್ಷಕರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷೆ ಜಯಮಾಲ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಚಂದ್ರಿಕಾ, ಕಾರ್ಯದರ್ಶಿ ಚಿತ್ರಲೇಖ ಕೆ, ಮುಖಂಡರಾದ ರೇವತಿ ಬಂಟ್ವಾಳ, ಸೌಮ್ಯ ಕಡಬ, ಕಾವ್ಯ ಸುಳ್ಯ, ಕವಿತಾ ನಾಯಕ್, ಜ್ಯೋತಿ ಮುಂತಾದವರು ಧರಣಿಯ ನೇತೃತ್ವ ವಹಿಸಿದ್ದರು.
Guest lectures protest in Mangalore for no increase in salary since five months.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm