ಬ್ರೇಕಿಂಗ್ ನ್ಯೂಸ್
28-09-22 03:45 pm Mangalore Correspondent ಕರಾವಳಿ
ಉಳ್ಳಾಲ, ಸೆ.28 : ಸರಕಾರಿ ಪ್ರಾಯೋಜಕತ್ವದಲ್ಲಿ ನಡೆದ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಶಾಸಕ ಯುಟಿ ಖಾದರ್ ಪಕ್ಕದಲ್ಲಿ ಸ್ಥಳೀಯ ಮಹಿಳೆಯೊಬ್ಬರ ಭಾವಚಿತ್ರ ಇರುವ ಫ್ಲೆಕ್ಸ್ ಅಳವಡಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಆಯೋಜಕರು ತಕ್ಷಣ ವಿವಾದಿತ ಫ್ಲೆಕ್ಸನ್ನ ತೆರವುಗೊಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಕೊಲ್ಯದ ನಾರಾಯಣ ಗುರು ಸಭಾಂಗಣದಲ್ಲಿ ಅನ್ನಪ್ರಾಶನ, ಪೌಷ್ಟಿಕ ಆಹಾರ, ಶಿಶು ಪ್ರದರ್ಶನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನ ಬುಧವಾರ ಏರ್ಪಡಿಸಲಾಗಿತ್ತು.


ಕಾರ್ಯಕ್ರಮದ ಪ್ರಚಾರಾರ್ಥ ಸಭಾಂಗಣದ ಹೊರಗಡೆ ಹಾಕಿರುವ ಫ್ಲೆಕ್ಸಲ್ಲಿ ಉಳ್ಳಾಲ ಶಾಸಕ ಯು.ಟಿ ಖಾದರ್ ಮತ್ತು ಅವರ ಪಕ್ಕದಲ್ಲಿ ಸ್ಥಳೀಯ ಹಿಂದು ಗರ್ಭಿಣಿ ಮಹಿಳೆಯೋರ್ವರ ಭಾವಚಿತ್ರಗಳನ್ನ ಹಾಕಲಾಗಿತ್ತು. ಕಾರ್ಯಕ್ರಮದ ಆಯೋಜಕರು ಫ್ಲೆಕ್ಸಲ್ಲಿ ಸ್ಥಳೀಯ ಹಿಂದೂ ಕಾರ್ಯಕರ್ತನ ಸಹೋದರಿ ಗರ್ಭಿಣಿಯಾಗಿದ್ದ ವೇಳೆ ತೆಗೆಸಿದ್ದ ಭಾವಚಿತ್ರವನ್ನ ಅನುಮತಿ ಇಲ್ಲದೆ ಜಾಲತಾಣದಿಂದ ನಕಲು ಮಾಡಿ ಮುದ್ರಿಸಿದ್ದರು. ಇದರ ವಿರುದ್ಧ ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸೀಮಂತ ಕಾರ್ಯಕ್ರಮದ ಸಭಾಂಗಣಕ್ಕೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಹಿಂದು ವಿರೋಧಿ ಖಾದರ್ ಎಂದು ಧಿಕ್ಕಾರ ಕೂಗಿದ್ದಾರೆ. ಹಿಂದು ಕಾರ್ಯಕರ್ತರ ಆಕ್ರೋಶಕ್ಕೆ ಮಣಿದ ಕಾರ್ಯಕ್ರಮದ ಆಯೋಜಕರು ಕೂಡಲೇ ಫ್ಲೆಕ್ಸನ್ನ ತೆರವುಗೊಳಿಸಿದ್ದಾರೆ.


ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು ಮಾತನಾಡಿ ತಾಯಂದಿರಿಗೆ ಸ್ಥೈರ್ಯ ನೀಡುವ ಕಾರ್ಯಕ್ರಮ ಎಂದು ಹೇಳಿಕೊಂಡು ಅನುಮತಿ ಇಲ್ಲದೆ ಯಾವುದೋ ಹಿಂದೂ ಹುಡುಗಿಯ ಫೋಟೊವನ್ನ ಸಾರ್ವಜನಿಕವಾಗಿ ಫ್ಲೆಕ್ಸ್ ಹಾಕಿ ಆಕೆ ಮುಜುಗರ ಪಡುವಂತೆ ಮಾಡಿದನ್ನ ಬಜರಂಗದಳ ಖಂಡಿಸುತ್ತಿದ್ದು ಕಾರ್ಯಕ್ರಮ ಆಯೋಜಕರ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡುವುದಾಗಿ ಹೇಳಿದರು.ಆಯೋಜಕರು ಮಾಡಿದ ಎಡವಟ್ಟಿನಿಂದ ಸರಕಾರಿ ಪ್ರಾಯೋಜಕತ್ವದಲ್ಲಿ ನಡೆದ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಗೊಂದಲ ನಡೆಯುವಂತಾಯಿತು.
Mangalore, Pregnant photo of woman used on government banner at Ullal without permission along with MLA UT Khader sparks controversy.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm