ಬ್ರೇಕಿಂಗ್ ನ್ಯೂಸ್
28-09-22 08:04 pm Mangalore Correspondent ಕರಾವಳಿ
ಉಳ್ಳಾಲ, ಸೆ.28 : ಚುನಾವಣೆಯಲ್ಲಿ ಇಪ್ಪತ್ತು, ಮೂವತ್ತು ಸಾವಿರ ಮತಗಳ ಅಂತರದಲ್ಲಿ ಗೆದ್ದವನಿಗೆ ಸಾಮೂಹಿಕ ಸೀಮಂತದಲ್ಲಿ ರಾಜಕೀಯ ಲಾಭ ಪಡೆಯುವ ಅಗತ್ಯತೆ ಇಲ್ಲ. ನಾಲ್ಕು ಜನ ಬಂದು ಬೊಬ್ಬೆ ಹೊಡೆದರೆ ಇಂತಹ ಮಾದರಿ ಕಾರ್ಯಕ್ರಮದ ಬಗ್ಗೆ ಊರಿಗೆ ಢಂಗುರ ಬಾರಿಸಿದಂತಾಯ್ತು. ಅವರಿಗೆ ನನ್ನ ಅಭಿನಂದನೆ ಎಂದು ಬಜರಂಗದಳದ ಕಾರ್ಯಕರ್ತರಿಗೆ ಶಾಸಕ ಯು.ಟಿ ಖಾದರ್ ಟಾಂಗ್ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಪ್ರಯುಕ್ತ ಬುಧವಾರ ಕೊಲ್ಯದ ನಾರಾಯಣಗುರು ಸಭಾಭವನದಲ್ಲಿ ನಡೆದ ಅನ್ನಪ್ರಾಶನ, ಪೌಷ್ಟಿಕ ಆಹಾರ ,ಶಿಶು ಪ್ರದರ್ಶನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.


ಕಾರ್ಯಕ್ರಮ ಆರಂಭಕ್ಕೂ ಮೊದಲು ಸಭಾಂಗಣದ ಹೊರಗೆ ಹಾಕಲಾಗಿದ್ದ ಫ್ಲೆಕ್ಸ್ ವಿಚಾರದಲ್ಲಿ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಫ್ಲೆಕ್ಸಲ್ಲಿ ಉಳ್ಳಾಲ ಶಾಸಕ ಯು.ಟಿ ಖಾದರ್ ಮತ್ತು ಅವರ ಪಕ್ಕದಲ್ಲಿ ಸ್ಥಳೀಯ ಹಿಂದು ಗರ್ಭಿಣಿ ಮಹಿಳೆಯೋರ್ವರ ಭಾವಚಿತ್ರ ಹಾಕಲಾಗಿತ್ತು. ಕಾರ್ಯಕ್ರಮದ ಆಯೋಜಕರು ಫ್ಲೆಕ್ಸ್ ನಲ್ಲಿ ಸ್ಥಳೀಯ ಹಿಂದು ಕಾರ್ಯಕರ್ತನ ಸಹೋದರಿ ಗರ್ಭಿಣಿಯಾಗಿದ್ದ ಭಾವಚಿತ್ರವನ್ನ ಅನುಮತಿ ಇಲ್ಲದೆ ಜಾಲತಾಣದಿಂದ ನಕಲು ಮಾಡಿ ಮುದ್ರಿಸಿದ್ದರು. ಇದರ ವಿರುದ್ಧ ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಕಾರ್ಯಕ್ರಮ ಆಯೋಜಕರು ಫ್ಲೆಕ್ಸನ್ನ ತೆರವುಗೊಳಿಸಿದ್ದರು.


ಸಾಮೂಹಿಕ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖಾದರ್, ಗರ್ಭಿಣಿಯರಿಗೆ ಅಗತ್ಯ ಉಳ್ಳ ಅರ್ಥಪೂರ್ಣ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಸೇರಿರುವ ಗರ್ಭಿಣಿಯರನ್ನ ಉದ್ದೇಶಿಸಿ ಮಾತನಾಡಿದ ಅವರು ಟೆನ್ಷನ್ ರಹಿತ ಆರೋಗ್ಯವಂತ ಮಗು ಮತ್ತು ತಾಯಂದಿರು ಸಮಾಜದಲ್ಲಿ ರೂಪುಗೊಳ್ಳಲಿ ಎಂದು ಹಾರೈಸಿದರು.
ಶಾಸಕ ಖಾದರ್ ಅವರು ಮಕ್ಕಳಿಗೆ ಅನ್ನಪ್ರಾಶನ ನಡೆಸಿದರು. ಸುಮಂಗಲೆಯರಿಂದ ಗರ್ಭಿಣಿಯರಿಗೆ ಬಾಗಿನ, ಫಲ, ಪುಷ್ಪ, ಉಡುಗೊರೆ, ಆರತಿ ಎತ್ತಿ ಸಾಮೂಹಿಕ ಸೀಮಂತ ನಡೆಸಲಾಯಿತು.
Banner of a pregnant woman without permission at Ullal, UT Khader slams Bajarangdal members.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm