ಬ್ರೇಕಿಂಗ್ ನ್ಯೂಸ್
29-09-22 07:10 pm Mangalore Correspondent ಕರಾವಳಿ
ಮಂಗಳೂರು, ಸೆ.29: ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರ ಒಡೆತನದಲ್ಲಿದ್ದ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಖರೀದಿಸಿದ್ದು, ಭವಿಷ್ಯದಲ್ಲಿ ಇವುಗಳ ಆಡಳಿತವನ್ನು ಕೆನರಾ ಸಂಸ್ಥೆಗಳೇ ನೋಡಿಕೊಳ್ಳಲಿವೆ.
ಮೇರಿಹಿಲ್ ಕೊಂಚಾಡಿಯಲ್ಲಿ 2012ರಲ್ಲಿ ವಿಕಾಸ್ ಪಿಯು ಕಾಲೇಜು ಮತ್ತು ಹಾಸ್ಟೆಲ್ ವ್ಯವಸ್ಥೆಯನ್ನು ಆರಂಭಿಸಲಾಗಿತ್ತು. ಆನಂತರ ವಿಕಾಸ್ ಕಾಲೇಜಿನಲ್ಲಿ ಪದವಿ ಕೋರ್ಸನ್ನೂ ಆರಂಭಿಸಲಾಗಿತ್ತು. ಮಂಗಳೂರಿನ ಸುವ್ಯವಸ್ಥಿತ ಪಿಯು ಕಾಲೇಜು ಎಂಬ ಗರಿಮೆಯನ್ನೂ ವಿಕಾಸ್ ಕಾಲೇಜು ಪಡೆದಿತ್ತು. ಏರ್ಪೋರ್ಟ್ ರಸ್ತೆಯಲ್ಲೇ ಕಾಲೇಜು ಕಟ್ಟಡ ಇದ್ದುದರಿಂದ ಅತ್ಯಲ್ಪ ಅವಧಿಯಲ್ಲಿ ಪ್ರಸಿದ್ಧಿಯನ್ನೂ ಪಡೆದಿತ್ತು.

ಹಾಗೆ ನೋಡಿದರೆ, 1993ರಲ್ಲಿಯೇ ವಿಕಾಸ್ ಎಜುಕೇಶನ್ ಟ್ರಸ್ಟನ್ನು ಕೃಷ್ಣ ಪಾಲೆಮಾರ್ ಸ್ಥಾಪಿಸಿದ್ದರು. 1994ರಿಂದ ವಿಕಾಸ್ ಹೆಸರಿನಲ್ಲಿ ಫಿಸಿಯೋಥೆರಪಿ ಶಿಕ್ಷಣವನ್ನೂ ಆರಂಭಿಸಲಾಗಿತ್ತು. ಫಿಸಿಯೋಥರೆಪಿಯ ವಿವಿಧ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ನೀಡುವ ಉಪಕ್ರಮ ನಡೆದು ಬಂದಿತ್ತು. ಆನಂತರ ಪಿಯು ಮತ್ತು ಪದವಿ ಕಾಲೇಜುಗಳನ್ನು ತೆರೆಯಲಾಗಿತ್ತು. ಸುಸಜ್ಜಿತ ಕಟ್ಟಡ ಮತ್ತು ಮೂಲಸೌಕರ್ಯಗಳಿದ್ದ ವಿಕಾಸ್ ಶಿಕ್ಷಣ ಸಂಸ್ಥೆಯನ್ನೀಗ ಅಧಿಕೃತವಾಗಿ ಮಂಗಳೂರಿನ ಪ್ರತಿಷ್ಠೆಯ ಸಂಕೇತವಾಗಿರುವ ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ವಿಲೀನ ಮಾಡಲಾಗಿದೆ. ಕೃಷ್ಣ ಪಾಲೆಮಾರ್ ಮತ್ತು ಕೆನರಾ ಹೈಸ್ಕೂಲ್ ಸಂಸ್ಥೆಗಳ ಟ್ರಸ್ಟಿಗಳ ಪ್ರಮುಖರು ಈ ಕುರಿತ ಒಪ್ಪಂದಕ್ಕೆ ಸಹಿ ಮಾಡಿದ್ದಾರೆ.
ಇನ್ನು ವಿಕಾಸ್ ಎಜುಕೇಶನ್ ಟ್ರಸ್ಟ್ ನಿಂದ ನಿರ್ವಹಿಸುತ್ತಿದ್ದ ಪದವಿ ಪೂರ್ವ, ಪದವಿ ಮತ್ತು ಫಿಸಿಯೋಥೆರಪಿ ಕಾಲೇಜುಗಳ ಸಂಪೂರ್ಣ ಆಡಳಿತ, ನಿರ್ವಹಣೆ ಮತ್ತು ಅದಕ್ಕೆ ಸಂಬಂಧಪಟ್ಟ ಎಲ್ಲ ಕಾರ್ಯಗಳು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಆಡಳಿತ ಮಂಡಳಿಯ ಮೂಲಕವೇ ನಡೆಯಲಿದೆ ಎಂದು ಅದರ ಟ್ರಸ್ಟಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore popular Vikas college is now taken over by Canara college group of Institutions. Vikas Pre University College is an educational institution run by Vikas Education Trust, in Mangalore, Karnataka, India. This college was established by the trust in the year 2012. The trust founded by Sri Krishna J Palemar who is a social activist and was also a Minister in B. S.Yediyurappa's Cabinet.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm