ಬ್ರೇಕಿಂಗ್ ನ್ಯೂಸ್
29-09-22 09:27 pm Mangalore Correspondent ಕರಾವಳಿ
ಮಂಗಳೂರು, ಸೆ.29: ಇತ್ತೀಚೆಗೆ ಕೊಲೆಯಾದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಮುಖ್ಯಮಂತ್ರಿ ಕಚೇರಿಯಿಂದ ಆದೇಶ ಮಾಡಲಾಗಿದೆ.
ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಸರಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ, ಇದೀಗ ಸರಕಾರಿ ಆದೇಶ ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಸೆ.27ರಿಂದಲೇ ನೇಮಕ ಮಾಡಿಕೊಳ್ಳುವಂತೆ ಸರಕಾರದ ಅಧೀನ ಕಾರ್ಯದರ್ಶಿ ಎಸ್.ಆರ್ ಶಿವಶಂಕರ್ ಆದೇಶದಲ್ಲಿ ತಿಳಿಸಿದ್ದಾರೆ.
ಗ್ರೂಪ್ ಸಿ ಹುದ್ದೆಗೆ ಕರ್ನಾಟಕ ಸೇವಾ ಅಧಿನಿಯಮದ ಪ್ರಕಾರ ನೇಮಿಸಿಕೊಳ್ಳಲು ಆದೇಶ ಮಾಡಿದ್ದು, ಹುದ್ದೆಗೆ ತಿಂಗಳ ವೇತನ 30,350 ರೂ. ಆಗಿರುತ್ತದೆ. ಎರಡು ತಿಂಗಳ ಒಳಗಾಗಿ ಶೈಕ್ಷಣಿಕ ದಾಖಲಾತಿಗಳನ್ನು ಸಂಬಂಧಪಟ್ಟ ಮಂಡಳಿಗೆ ನೀಡಬೇಕಾಗಿರುತ್ತದೆ. ಆದರೆ ಈ ಹುದ್ದೆಯು ಗುತ್ತಿಗೆ ಆಧಾರದಲ್ಲಿ ಇರಲಿದ್ದು, ಹಾಲಿ ಮುಖ್ಯಮಂತ್ರಿಯವರ ಪದಾವಧಿಯ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆಗೆ ಹಿರಿಯ ಸಹಾಯಕ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ. ಇದೀಗ ಬೇರೊಬ್ಬ ವ್ಯಕ್ತಿಯನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿ ಖಾಲಿಯಾದ ಹುದ್ದೆಗೆ ಪ್ರವೀಣ್ ಪತ್ನಿಯನ್ನು ನೇಮಕ ಮಾಡಿಕೊಳ್ಳಲು ಆದೇಶ ಮಾಡಲಾಗಿದೆ.
Praveen bellare murder case, wide given temporary job at CM Bommais office in Bangalore.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 04:37 pm
HK News Desk
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
23-06-25 06:56 pm
Mangalore Correspondent
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
Dharmasthala Murder, SP Arun Kumar; ಧರ್ಮಸ್ಥಳ...
23-06-25 05:04 pm
Mining Officer Krishnaveni Suspended; ‘ಹೆಡ್ ಲ...
21-06-25 11:04 pm
Krishnaveni Mines Geology, Mangalore;18 ದಿನ ಜ...
21-06-25 03:56 pm
23-06-25 11:47 am
Udupi Correspondent
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm