ಬ್ರೇಕಿಂಗ್ ನ್ಯೂಸ್
29-09-22 09:27 pm Mangalore Correspondent ಕರಾವಳಿ
ಮಂಗಳೂರು, ಸೆ.29: ಇತ್ತೀಚೆಗೆ ಕೊಲೆಯಾದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಮುಖ್ಯಮಂತ್ರಿ ಕಚೇರಿಯಿಂದ ಆದೇಶ ಮಾಡಲಾಗಿದೆ.
ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಸರಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ, ಇದೀಗ ಸರಕಾರಿ ಆದೇಶ ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಸೆ.27ರಿಂದಲೇ ನೇಮಕ ಮಾಡಿಕೊಳ್ಳುವಂತೆ ಸರಕಾರದ ಅಧೀನ ಕಾರ್ಯದರ್ಶಿ ಎಸ್.ಆರ್ ಶಿವಶಂಕರ್ ಆದೇಶದಲ್ಲಿ ತಿಳಿಸಿದ್ದಾರೆ.

ಗ್ರೂಪ್ ಸಿ ಹುದ್ದೆಗೆ ಕರ್ನಾಟಕ ಸೇವಾ ಅಧಿನಿಯಮದ ಪ್ರಕಾರ ನೇಮಿಸಿಕೊಳ್ಳಲು ಆದೇಶ ಮಾಡಿದ್ದು, ಹುದ್ದೆಗೆ ತಿಂಗಳ ವೇತನ 30,350 ರೂ. ಆಗಿರುತ್ತದೆ. ಎರಡು ತಿಂಗಳ ಒಳಗಾಗಿ ಶೈಕ್ಷಣಿಕ ದಾಖಲಾತಿಗಳನ್ನು ಸಂಬಂಧಪಟ್ಟ ಮಂಡಳಿಗೆ ನೀಡಬೇಕಾಗಿರುತ್ತದೆ. ಆದರೆ ಈ ಹುದ್ದೆಯು ಗುತ್ತಿಗೆ ಆಧಾರದಲ್ಲಿ ಇರಲಿದ್ದು, ಹಾಲಿ ಮುಖ್ಯಮಂತ್ರಿಯವರ ಪದಾವಧಿಯ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆಗೆ ಹಿರಿಯ ಸಹಾಯಕ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ. ಇದೀಗ ಬೇರೊಬ್ಬ ವ್ಯಕ್ತಿಯನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿ ಖಾಲಿಯಾದ ಹುದ್ದೆಗೆ ಪ್ರವೀಣ್ ಪತ್ನಿಯನ್ನು ನೇಮಕ ಮಾಡಿಕೊಳ್ಳಲು ಆದೇಶ ಮಾಡಲಾಗಿದೆ.
Praveen bellare murder case, wide given temporary job at CM Bommais office in Bangalore.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm