ಬ್ರೇಕಿಂಗ್ ನ್ಯೂಸ್
30-09-22 09:05 pm Mangalore Correspondent ಕರಾವಳಿ
ಉಳ್ಳಾಲ, ಸೆ.30 : ಅಭಿವೃದ್ಧಿ ಕಾಮಗಾರಿಗಳಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಾ ಬಂದಿರುವ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ರಾಜಕಾರಣ ಯುಗಾಂತ್ಯಗೊಳಿಸಲು ನಮ್ಮ ಪಕ್ಷದೊಳಗಿನ ಒಗ್ಗಟ್ಟಿನ ಮಂತ್ರವೇ ಸೂತ್ರವೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಕಾರ್ಯಕರ್ತರಿಗೆ ಕರೆ ನೀಡಿದರು.
ಪಂಡಿತ್ ಹೌಸ್ ಜಂಕ್ಷನ್ ನ ಮಾಯಾದೀಪ ಕಾಂಪ್ಲೆಕ್ಸಲ್ಲಿ ಶುಕ್ರವಾರ ಭಾರತೀಯ ಜನತಾ ಪಕ್ಷ ಮಂಗಳೂರು ವಿಧಾನಸಭಾ ಕ್ಷೇತ್ರದ ನೂತನ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ನವರಾತ್ರಿಯ ಶುಭ ದಿನದಂದೇ ಪಕ್ಷದ ನೂತನ ಕಾರ್ಯಾಲಯವು ಉದ್ಘಾಟನೆಗೊಂಡಿದ್ದು ಕಾರ್ಯಕರ್ತರಿಗೆ ವಿಶೇಷ ಶಕ್ತಿ ನೀಡಿದಂತಾಗಿದೆ. ಕಾರ್ಯಕರ್ತರ ಭಾವನೆಗೆ ಪೂರಕವಾದ ಕಾರ್ಯಾಲಯವನ್ನ ಕ್ಷೇತ್ರಾಧ್ಯಕ್ಷರು ನಿರ್ಮಿಸಿರುವುದು ಅಭಿನಂದನೀಯ. ಮುಂದಿನ ಬಾರಿ ಉಳ್ಳಾಲದಲ್ಲಿ ಬಿಜೆಪಿ ಪಕ್ಷದ ಶಾಸಕ ಗೆದ್ದು ಬರುವ ಸಂಕಲ್ಪ ತೊಟ್ಟು ಪ್ರತಿ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.


ಹೆಂಗಸರಿದ್ದಾರೆಂದು ಖಾದರ್ ಭಾಷಣ
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಮಾತನಾಡಿ ಮೊನ್ನೆ ಕೊಲ್ಯದಲ್ಲಿ ನಡೆದ ಸರಕಾರಿ ಪ್ರಾಯೋಜಕತ್ವದ ಸೀಮಂತ ಕಾರ್ಯಕ್ರಮದಲ್ಲಿ ಅಲ್ಲಿ ನೆರೆದಿದ್ದ ಹೆಂಗಸರ ಧೈರ್ಯದಲ್ಲಿ ಶಾಸಕ ಯು.ಟಿ.ಖಾದರ್ ಭಾಷಣ ಮಾಡಿದ್ದಾರೆ. 20-30 ಸಾವಿರ ಮತಗಳಿಂದ ಗೆಲ್ಲುತ್ತಿದ್ದೇನೆಂದು ಬೀಗುತ್ತಿರುವ ನಿಮ್ಮನ್ನ ಅದೇ 20-30 ಸಾವಿರ ಮತಗಳ ಅಂತರದಲ್ಲೇ ಸೋಲುಣಿಸಲೂ ಕ್ಷೇತ್ರದ ಮತದಾರರಿಗೆ ತಿಳಿದಿದ್ದು ಮುಂಬರುವ ಮಾರ್ಚ್ ನಲ್ಲಿ ಖಾದರ್ ರಾಜಕೀಯ ಅಂತ್ಯಗೊಳ್ಳಲಿದೆ ಎಂದರು.

ಅಲ್ಪಸಂಖ್ಯಾತರ ಮತ ಬೇಟೆಗಾಗಿ ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರನ್ನ ಕೋಟೆಕಾರಲ್ಲಿ ನೆಲೆಸಲು ಅವಕಾಶ ಕಲ್ಪಿಸಲು ಮಾಡುತ್ತಿರುವ ಸಂಚು ನಮಗೆ ತಿಳಿದಿದೆ. ನೀವು ಭಾರತ್ ಜೋಡೊ ಯಾತ್ರೆ ಮಾಡುವ ಬದಲು ಆದಷ್ಟು ಶೀಘ್ರನೇ ಕುತ್ತಾರು ವಿ.ವಿ. ರಸ್ತೆಯನ್ನ ಸಂಪೂರ್ಣಗೊಳಿಸುವಂತೆ ಆಗ್ರಹಿಸಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಕಸ್ತೂರಿ ಪಂಜ, ಮಾಜಿ ಶಾಸಕರಾದ ಕೆ.ಜಯರಾಮ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ , ಕ್ಷೇತ್ರ ಪ್ರಮುಖರಾದ ಜಯಶ್ರೀ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
Mangalore New BJP office inaugurated in Ullal.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm