ಬ್ರೇಕಿಂಗ್ ನ್ಯೂಸ್
30-09-22 09:05 pm Mangalore Correspondent ಕರಾವಳಿ
ಉಳ್ಳಾಲ, ಸೆ.30 : ಅಭಿವೃದ್ಧಿ ಕಾಮಗಾರಿಗಳಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಾ ಬಂದಿರುವ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ರಾಜಕಾರಣ ಯುಗಾಂತ್ಯಗೊಳಿಸಲು ನಮ್ಮ ಪಕ್ಷದೊಳಗಿನ ಒಗ್ಗಟ್ಟಿನ ಮಂತ್ರವೇ ಸೂತ್ರವೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಕಾರ್ಯಕರ್ತರಿಗೆ ಕರೆ ನೀಡಿದರು.
ಪಂಡಿತ್ ಹೌಸ್ ಜಂಕ್ಷನ್ ನ ಮಾಯಾದೀಪ ಕಾಂಪ್ಲೆಕ್ಸಲ್ಲಿ ಶುಕ್ರವಾರ ಭಾರತೀಯ ಜನತಾ ಪಕ್ಷ ಮಂಗಳೂರು ವಿಧಾನಸಭಾ ಕ್ಷೇತ್ರದ ನೂತನ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ನವರಾತ್ರಿಯ ಶುಭ ದಿನದಂದೇ ಪಕ್ಷದ ನೂತನ ಕಾರ್ಯಾಲಯವು ಉದ್ಘಾಟನೆಗೊಂಡಿದ್ದು ಕಾರ್ಯಕರ್ತರಿಗೆ ವಿಶೇಷ ಶಕ್ತಿ ನೀಡಿದಂತಾಗಿದೆ. ಕಾರ್ಯಕರ್ತರ ಭಾವನೆಗೆ ಪೂರಕವಾದ ಕಾರ್ಯಾಲಯವನ್ನ ಕ್ಷೇತ್ರಾಧ್ಯಕ್ಷರು ನಿರ್ಮಿಸಿರುವುದು ಅಭಿನಂದನೀಯ. ಮುಂದಿನ ಬಾರಿ ಉಳ್ಳಾಲದಲ್ಲಿ ಬಿಜೆಪಿ ಪಕ್ಷದ ಶಾಸಕ ಗೆದ್ದು ಬರುವ ಸಂಕಲ್ಪ ತೊಟ್ಟು ಪ್ರತಿ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.


ಹೆಂಗಸರಿದ್ದಾರೆಂದು ಖಾದರ್ ಭಾಷಣ
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಮಾತನಾಡಿ ಮೊನ್ನೆ ಕೊಲ್ಯದಲ್ಲಿ ನಡೆದ ಸರಕಾರಿ ಪ್ರಾಯೋಜಕತ್ವದ ಸೀಮಂತ ಕಾರ್ಯಕ್ರಮದಲ್ಲಿ ಅಲ್ಲಿ ನೆರೆದಿದ್ದ ಹೆಂಗಸರ ಧೈರ್ಯದಲ್ಲಿ ಶಾಸಕ ಯು.ಟಿ.ಖಾದರ್ ಭಾಷಣ ಮಾಡಿದ್ದಾರೆ. 20-30 ಸಾವಿರ ಮತಗಳಿಂದ ಗೆಲ್ಲುತ್ತಿದ್ದೇನೆಂದು ಬೀಗುತ್ತಿರುವ ನಿಮ್ಮನ್ನ ಅದೇ 20-30 ಸಾವಿರ ಮತಗಳ ಅಂತರದಲ್ಲೇ ಸೋಲುಣಿಸಲೂ ಕ್ಷೇತ್ರದ ಮತದಾರರಿಗೆ ತಿಳಿದಿದ್ದು ಮುಂಬರುವ ಮಾರ್ಚ್ ನಲ್ಲಿ ಖಾದರ್ ರಾಜಕೀಯ ಅಂತ್ಯಗೊಳ್ಳಲಿದೆ ಎಂದರು.

ಅಲ್ಪಸಂಖ್ಯಾತರ ಮತ ಬೇಟೆಗಾಗಿ ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರನ್ನ ಕೋಟೆಕಾರಲ್ಲಿ ನೆಲೆಸಲು ಅವಕಾಶ ಕಲ್ಪಿಸಲು ಮಾಡುತ್ತಿರುವ ಸಂಚು ನಮಗೆ ತಿಳಿದಿದೆ. ನೀವು ಭಾರತ್ ಜೋಡೊ ಯಾತ್ರೆ ಮಾಡುವ ಬದಲು ಆದಷ್ಟು ಶೀಘ್ರನೇ ಕುತ್ತಾರು ವಿ.ವಿ. ರಸ್ತೆಯನ್ನ ಸಂಪೂರ್ಣಗೊಳಿಸುವಂತೆ ಆಗ್ರಹಿಸಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಕಸ್ತೂರಿ ಪಂಜ, ಮಾಜಿ ಶಾಸಕರಾದ ಕೆ.ಜಯರಾಮ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ , ಕ್ಷೇತ್ರ ಪ್ರಮುಖರಾದ ಜಯಶ್ರೀ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
Mangalore New BJP office inaugurated in Ullal.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm