ಬ್ರೇಕಿಂಗ್ ನ್ಯೂಸ್
01-10-22 01:21 pm Mangalore Correspondent ಕರಾವಳಿ
ಮಂಗಳೂರು, ಅ.1: ಸುರತ್ಕಲ್ ಜಂಕ್ಷನ್ ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರು ನಾಮಕರಣ ಮಾಡಬೇಕೆಂಬ ಶಾಸಕ ಭರತ್ ಶೆಟ್ಟಿ ಅಹವಾಲನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿದೆ.
ವೀರ ಸಾವರ್ಕರ್ ಹೆಸರಿಡಬೇಕೆಂದು ಒಂದು ವರ್ಷದ ಹಿಂದೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಹಾನಗರ ಪಾಲಿಕೆಗೆ ಪ್ರಸ್ತಾವ ಮುಂದಿಡಲಾಗಿತ್ತು. 2021ರ ಆಗಸ್ಟ್ 3ರಂದು ನಡೆದ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿತ್ತು. ಕಾಂಗ್ರೆಸ್ ಸದಸ್ಯ ವಿನಯರಾಜ್, ಎಸ್ಡಿಪಿಐ ಸದಸ್ಯರಾದ ಮುನೀಬ್ ಬೆಂಗ್ರೆ ಮತ್ತು ಶಂಶದ್ ಅಬುಬಕ್ಕರ್ ವಿರೋಧಿಸಿದ್ದರು. ಆನಂತರ, ಪ್ರಸ್ತಾಪವು ಸ್ಥಾಯಿ ಸಮಿತಿಯಿಂದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಬಂದಿತ್ತು.
ಇತ್ತೀಚೆಗೆ ಹೊಸತಾಗಿ ಮೇಯರ್ ಆಯ್ಕೆಯಾದ ಬಳಿಕ ಸೆ.30ರಂದು ಮೊದಲ ಬಾರಿಗೆ ಸಾಮಾನ್ಯ ಸಭೆ ನಡೆದಿದ್ದು, ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಇದೇ ವೇಳೆ, ಮಹಾನಗರ ಪಾಲಿಕೆಯ ಆಡಳಿತ ಸುರತ್ಕಲ್ ಜಂಕ್ಷನ್ನಿಗೆ ಸಾವರ್ಕರ್ ಹೆಸರಿಡುವ ಪ್ರಸ್ತಾಪವನ್ನು ವಿರೋಧ ಪಕ್ಷಗಳ ಸದಸ್ಯರ ವಿರೋಧದ ನಡುವೆಯೂ ಅಂಗೀಕರಿಸಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಿರ್ಣಯ ಮಾಡುವುದಾಗಿ ಹೇಳಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಪತ್ರಿಕೆಯಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿ, ಆಕ್ಷೇಪ ಮತ್ತು ಸಲಹೆಗಳನ್ನು ಸ್ವೀಕರಿಸಲಿದೆ.
ಇತ್ತೀಚೆಗೆ ಆಗಸ್ಟ್ 14ರಂದು ಸುರತ್ಕಲ್ ಜಂಕ್ಷನ್ನ ಮೇಲ್ಸೇತುವೆ ಅಡಿಭಾಗದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದು ಕೆಲವರ ಆಕ್ಷೇಪಕ್ಕೆ ಗುರಿಯಾಗಿತ್ತು. ಕೊನೆಗೆ, ಫ್ಲೆಕ್ಸನ್ನು ಸುರತ್ಕಲ್ ಪೊಲೀಸರು ತೆರವು ಮಾಡಿದ್ದರು.
The proposal of renaming Suratkal Junction as Veer Savarkar junction was accepted in the general meeting of Mangaluru City Corporation (MCC) on Friday September 30.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm