ಬ್ರೇಕಿಂಗ್ ನ್ಯೂಸ್
01-10-22 01:21 pm Mangalore Correspondent ಕರಾವಳಿ
ಮಂಗಳೂರು, ಅ.1: ಸುರತ್ಕಲ್ ಜಂಕ್ಷನ್ ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರು ನಾಮಕರಣ ಮಾಡಬೇಕೆಂಬ ಶಾಸಕ ಭರತ್ ಶೆಟ್ಟಿ ಅಹವಾಲನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿದೆ.
ವೀರ ಸಾವರ್ಕರ್ ಹೆಸರಿಡಬೇಕೆಂದು ಒಂದು ವರ್ಷದ ಹಿಂದೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಹಾನಗರ ಪಾಲಿಕೆಗೆ ಪ್ರಸ್ತಾವ ಮುಂದಿಡಲಾಗಿತ್ತು. 2021ರ ಆಗಸ್ಟ್ 3ರಂದು ನಡೆದ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿತ್ತು. ಕಾಂಗ್ರೆಸ್ ಸದಸ್ಯ ವಿನಯರಾಜ್, ಎಸ್ಡಿಪಿಐ ಸದಸ್ಯರಾದ ಮುನೀಬ್ ಬೆಂಗ್ರೆ ಮತ್ತು ಶಂಶದ್ ಅಬುಬಕ್ಕರ್ ವಿರೋಧಿಸಿದ್ದರು. ಆನಂತರ, ಪ್ರಸ್ತಾಪವು ಸ್ಥಾಯಿ ಸಮಿತಿಯಿಂದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಬಂದಿತ್ತು.
ಇತ್ತೀಚೆಗೆ ಹೊಸತಾಗಿ ಮೇಯರ್ ಆಯ್ಕೆಯಾದ ಬಳಿಕ ಸೆ.30ರಂದು ಮೊದಲ ಬಾರಿಗೆ ಸಾಮಾನ್ಯ ಸಭೆ ನಡೆದಿದ್ದು, ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಇದೇ ವೇಳೆ, ಮಹಾನಗರ ಪಾಲಿಕೆಯ ಆಡಳಿತ ಸುರತ್ಕಲ್ ಜಂಕ್ಷನ್ನಿಗೆ ಸಾವರ್ಕರ್ ಹೆಸರಿಡುವ ಪ್ರಸ್ತಾಪವನ್ನು ವಿರೋಧ ಪಕ್ಷಗಳ ಸದಸ್ಯರ ವಿರೋಧದ ನಡುವೆಯೂ ಅಂಗೀಕರಿಸಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಿರ್ಣಯ ಮಾಡುವುದಾಗಿ ಹೇಳಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಪತ್ರಿಕೆಯಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿ, ಆಕ್ಷೇಪ ಮತ್ತು ಸಲಹೆಗಳನ್ನು ಸ್ವೀಕರಿಸಲಿದೆ.
ಇತ್ತೀಚೆಗೆ ಆಗಸ್ಟ್ 14ರಂದು ಸುರತ್ಕಲ್ ಜಂಕ್ಷನ್ನ ಮೇಲ್ಸೇತುವೆ ಅಡಿಭಾಗದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದು ಕೆಲವರ ಆಕ್ಷೇಪಕ್ಕೆ ಗುರಿಯಾಗಿತ್ತು. ಕೊನೆಗೆ, ಫ್ಲೆಕ್ಸನ್ನು ಸುರತ್ಕಲ್ ಪೊಲೀಸರು ತೆರವು ಮಾಡಿದ್ದರು.
The proposal of renaming Suratkal Junction as Veer Savarkar junction was accepted in the general meeting of Mangaluru City Corporation (MCC) on Friday September 30.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm