ಬ್ರೇಕಿಂಗ್ ನ್ಯೂಸ್
01-10-22 01:21 pm Mangalore Correspondent ಕರಾವಳಿ
ಮಂಗಳೂರು, ಅ.1: ಸುರತ್ಕಲ್ ಜಂಕ್ಷನ್ ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರು ನಾಮಕರಣ ಮಾಡಬೇಕೆಂಬ ಶಾಸಕ ಭರತ್ ಶೆಟ್ಟಿ ಅಹವಾಲನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿದೆ.
ವೀರ ಸಾವರ್ಕರ್ ಹೆಸರಿಡಬೇಕೆಂದು ಒಂದು ವರ್ಷದ ಹಿಂದೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಹಾನಗರ ಪಾಲಿಕೆಗೆ ಪ್ರಸ್ತಾವ ಮುಂದಿಡಲಾಗಿತ್ತು. 2021ರ ಆಗಸ್ಟ್ 3ರಂದು ನಡೆದ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿತ್ತು. ಕಾಂಗ್ರೆಸ್ ಸದಸ್ಯ ವಿನಯರಾಜ್, ಎಸ್ಡಿಪಿಐ ಸದಸ್ಯರಾದ ಮುನೀಬ್ ಬೆಂಗ್ರೆ ಮತ್ತು ಶಂಶದ್ ಅಬುಬಕ್ಕರ್ ವಿರೋಧಿಸಿದ್ದರು. ಆನಂತರ, ಪ್ರಸ್ತಾಪವು ಸ್ಥಾಯಿ ಸಮಿತಿಯಿಂದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಬಂದಿತ್ತು.
ಇತ್ತೀಚೆಗೆ ಹೊಸತಾಗಿ ಮೇಯರ್ ಆಯ್ಕೆಯಾದ ಬಳಿಕ ಸೆ.30ರಂದು ಮೊದಲ ಬಾರಿಗೆ ಸಾಮಾನ್ಯ ಸಭೆ ನಡೆದಿದ್ದು, ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಇದೇ ವೇಳೆ, ಮಹಾನಗರ ಪಾಲಿಕೆಯ ಆಡಳಿತ ಸುರತ್ಕಲ್ ಜಂಕ್ಷನ್ನಿಗೆ ಸಾವರ್ಕರ್ ಹೆಸರಿಡುವ ಪ್ರಸ್ತಾಪವನ್ನು ವಿರೋಧ ಪಕ್ಷಗಳ ಸದಸ್ಯರ ವಿರೋಧದ ನಡುವೆಯೂ ಅಂಗೀಕರಿಸಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಿರ್ಣಯ ಮಾಡುವುದಾಗಿ ಹೇಳಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಪತ್ರಿಕೆಯಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿ, ಆಕ್ಷೇಪ ಮತ್ತು ಸಲಹೆಗಳನ್ನು ಸ್ವೀಕರಿಸಲಿದೆ.
ಇತ್ತೀಚೆಗೆ ಆಗಸ್ಟ್ 14ರಂದು ಸುರತ್ಕಲ್ ಜಂಕ್ಷನ್ನ ಮೇಲ್ಸೇತುವೆ ಅಡಿಭಾಗದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದು ಕೆಲವರ ಆಕ್ಷೇಪಕ್ಕೆ ಗುರಿಯಾಗಿತ್ತು. ಕೊನೆಗೆ, ಫ್ಲೆಕ್ಸನ್ನು ಸುರತ್ಕಲ್ ಪೊಲೀಸರು ತೆರವು ಮಾಡಿದ್ದರು.
The proposal of renaming Suratkal Junction as Veer Savarkar junction was accepted in the general meeting of Mangaluru City Corporation (MCC) on Friday September 30.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm