ಬ್ರೇಕಿಂಗ್ ನ್ಯೂಸ್
01-10-22 10:59 pm Mangalore Correspondent ಕರಾವಳಿ
ಮಂಗಳೂರು, ಅ.1: ಮುಂಜಾಗ್ರತಾ ಕ್ರಮವಾಗಿ ಬಂಧಿಸಲ್ಪಟ್ಟಿದ್ದ ಪಿಎಫ್ಐ ಸಂಘಟನೆಗೆ ಸೇರಿದ 14 ಮಂದಿಗೆ ಜಾಮೀನು ಲಭಿಸಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೆ.27ರ ನಸುಕಿನಲ್ಲಿ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮಂದಿಯನ್ನು ಬಂಧಿಸಲಾಗಿತ್ತು. 107 ಮತ್ತು 151 ಸೆಕ್ಷನ್ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ವಶಕ್ಕೆ ಪಡೆದು ತಹಸೀಲ್ದಾರ್ ಎದುರು ಹಾಜರುಪಡಿಸಿ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಪಿಎಫ್ಐ ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಬಂಟ್ವಾಳದ ಇಜಾಜ್ ಅಹ್ಮದ್, ಪುತ್ತೂರು ಜಿಲ್ಲಾ ಘಟಕದ ಅಧ್ಯಕ್ಷ ಜಾಬೀರ್ ಅರಿಯಡ್ಕ ಸೇರಿ ಒಟ್ಟು 14 ಮಂದಿಯನ್ನು ಬಂಧಿಸಲಾಗಿತ್ತು. ಅವರೆಲ್ಲರೂ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಎಸ್ಪಿ ಋಷಿಕೇಷ್ ಸೋನವಾಣೆ ತಿಳಿಸಿದ್ದಾರೆ.
ಸೆ.28ರಂದು ಬೆಳಗ್ಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶಾದ್ಯಂತ ನಿಷೇಧಿಸಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ವೇಳೆ, ಅಹಿತಕರ ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಪಿಎಫ್ಐ ಸಂಘಟನೆಯಲ್ಲಿ ಎರಡನೇ ಹಂತದ ನಾಯಕರಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸೆ.22ರಂದು ಎನ್ಐಎ ಜೊತೆಗೆ ದಾಳಿ ನಡೆಸಿದ ವೇಳೆ ರಾಜ್ಯ ಮಟ್ಟದ ನಾಯಕರಾಗಿ ಗುರುತಿಸಲ್ಪಟ್ಟಿದ್ದವರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ಬೆಂಗಳೂರಿನ ಕೆಜೆ ಹಳ್ಳಿ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಬಂಧಿಸಲಾಗಿತ್ತು.
14 of PFI members get bail after arrest during PFI ban in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm