ಬ್ರೇಕಿಂಗ್ ನ್ಯೂಸ್
02-10-22 07:01 pm Mangalore Correspondent ಕರಾವಳಿ
ಉಳ್ಳಾಲ, ಸೆ.2 : ಟ್ರಾಫಿಕ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.
ಉಳ್ಳಾಲಬೈಲಿನಲ್ಲಿ ಘಟನೆ ನಡೆದಿದ್ದು ಗಾಯಗೊಂಡ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕೇಶ್ ನಾಯ್ಕ್ ಅವರನ್ನು ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಕೇಶ್ ನಾಯ್ಕ್ ಮತ್ತು ಎಎಸ್ಐ ಮಂಜುಳಾ ಅವರು ಹೈವೇ ಪೆಟ್ರೋಲ್ ವಾಹನದಲ್ಲಿ ಭಾನುವಾರ ಸಂಜೆ ಉಳ್ಳಾಲಬೈಲಲ್ಲಿ ಗಸ್ತಿನಲ್ಲಿದ್ದ ವೇಳೆ ಘಟನೆ ನಡೆದಿದೆ.


ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ಸ್ವಿಫ್ಟ್ ಕಾರನ್ನ ಲೋಕೇಶ್ ಅವರು ತಪಾಸಣೆಗಾಗಿ ತಡೆದು ಬದಿಗೆ ನಿಲ್ಲುವಂತೆ ಸೂಚಿಸಿದ್ದರು. ಬದಿಗೆ ಬಂದಿದ್ದ ಕಾರು ಏಕಾಏಕಿ ಎದುರಲ್ಲಿದ್ದ ಲೋಕೇಶ್ ಗೆ ಬಲವಾಗಿ ಡಿಕ್ಕಿ ಹೊಡೆದು ಉಳ್ಳಾಲದ ಕಡೆಗೆ ಪರಾರಿಯಾಗಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಲೋಕೇಶ್ ಅವರು ರಸ್ತೆಯ ವಿಭಜಕಕ್ಕೆ ಎಸೆಯಲ್ಪಟ್ಟಿದ್ದಾರೆ. ತಲೆಯ ಭಾಗಕ್ಕೆ ಡಿವೈಡರ್ ಬಡಿದು ಲೋಕೇಶ್ ಗಂಭೀರ ಗಾಯಗೊಂಡಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನ ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಡಿಕ್ಕಿ ಹೊಡೆದು ಪರಾರಿಯಾದ ಸ್ವಿಫ್ಟ್ ಕಾರಿನ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಸಮೀಪದ ಸಿಸಿಟಿವಿಗಳನ್ನ ತಪಾಸಣೆ ನಡೆಸುತ್ತಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Hit and run accident in Ullal, traffic police constable was rammed by an unidentified car and was thrown to the divider, constable Lokesh Nail is said to be injured seriously and is critical.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm