ಬ್ರೇಕಿಂಗ್ ನ್ಯೂಸ್
02-10-22 07:01 pm Mangalore Correspondent ಕರಾವಳಿ
ಉಳ್ಳಾಲ, ಸೆ.2 : ಟ್ರಾಫಿಕ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.
ಉಳ್ಳಾಲಬೈಲಿನಲ್ಲಿ ಘಟನೆ ನಡೆದಿದ್ದು ಗಾಯಗೊಂಡ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕೇಶ್ ನಾಯ್ಕ್ ಅವರನ್ನು ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಕೇಶ್ ನಾಯ್ಕ್ ಮತ್ತು ಎಎಸ್ಐ ಮಂಜುಳಾ ಅವರು ಹೈವೇ ಪೆಟ್ರೋಲ್ ವಾಹನದಲ್ಲಿ ಭಾನುವಾರ ಸಂಜೆ ಉಳ್ಳಾಲಬೈಲಲ್ಲಿ ಗಸ್ತಿನಲ್ಲಿದ್ದ ವೇಳೆ ಘಟನೆ ನಡೆದಿದೆ.
ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ಸ್ವಿಫ್ಟ್ ಕಾರನ್ನ ಲೋಕೇಶ್ ಅವರು ತಪಾಸಣೆಗಾಗಿ ತಡೆದು ಬದಿಗೆ ನಿಲ್ಲುವಂತೆ ಸೂಚಿಸಿದ್ದರು. ಬದಿಗೆ ಬಂದಿದ್ದ ಕಾರು ಏಕಾಏಕಿ ಎದುರಲ್ಲಿದ್ದ ಲೋಕೇಶ್ ಗೆ ಬಲವಾಗಿ ಡಿಕ್ಕಿ ಹೊಡೆದು ಉಳ್ಳಾಲದ ಕಡೆಗೆ ಪರಾರಿಯಾಗಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಲೋಕೇಶ್ ಅವರು ರಸ್ತೆಯ ವಿಭಜಕಕ್ಕೆ ಎಸೆಯಲ್ಪಟ್ಟಿದ್ದಾರೆ. ತಲೆಯ ಭಾಗಕ್ಕೆ ಡಿವೈಡರ್ ಬಡಿದು ಲೋಕೇಶ್ ಗಂಭೀರ ಗಾಯಗೊಂಡಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನ ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಡಿಕ್ಕಿ ಹೊಡೆದು ಪರಾರಿಯಾದ ಸ್ವಿಫ್ಟ್ ಕಾರಿನ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಸಮೀಪದ ಸಿಸಿಟಿವಿಗಳನ್ನ ತಪಾಸಣೆ ನಡೆಸುತ್ತಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Hit and run accident in Ullal, traffic police constable was rammed by an unidentified car and was thrown to the divider, constable Lokesh Nail is said to be injured seriously and is critical.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm