ಬ್ರೇಕಿಂಗ್ ನ್ಯೂಸ್
03-10-22 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.3: ಟ್ರಾಫಿಕ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಮತ್ತು ಅದರ ಅಪ್ರಾಪ್ತ ಚಾಲಕನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಳ್ಳಾಲ ಮುಕ್ಕಚ್ಚೇರಿ ಮೂಲದ 17 ರ ಹರೆಯದ ಅಪ್ರಾಪ್ತ ಯುವಕ ಆರೋಪಿಯಾಗಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಲೋಕೇಶ್ ನಾಯ್ಕ್ ಅವರು ಎಎಸ್ಐ ಮಂಜುಳಾ ಜೊತೆ ನಿನ್ನೆ ಸಂಜೆ ಉಳ್ಳಾಲಬೈಲಿನಲ್ಲಿ ಕರ್ತವ್ಯದಲ್ಲಿದ್ದಾಗ ಘಟನೆ ನಡೆದಿತ್ತು.


ತೊಕ್ಕೊಟ್ಟಿನಿಂದ ಉಳ್ಳಾಲ ಕಡೆಗೆ ಧಾವಿಸುತ್ತಿದ್ದ ಸ್ವಿಫ್ಟ್ ಕಾರನ್ನ ಗಸ್ತಿನಲ್ಲಿದ್ದ ಲೋಕೇಶ್ ಅವರು ತಪಾಸಣೆಗಾಗಿ ಬದಿಗೆ ನಿಲ್ಲಿಸುವಂತೆ ಸೂಚಿಸಿದ್ದರು. ಕಾರನ್ನ ಬದಿಗೆ ನಿಲ್ಲಿಸಲು ಮುಂದಾಗಿದ್ದ ಅಪ್ರಾಪ್ತ ಚಾಲಕ ಏಕಾಏಕಿ ಮುಂದಕ್ಕೆ ಚಲಾಯಿಸಿ ಲೋಕೇಶ್ ಅವರಿಗೆ ಡಿಕ್ಕಿಯಾಗಿಸಿ ಪರಾರಿಯಾಗಿದ್ದ. ಕಾರು ಡಿಕ್ಕಿಯಾದ ರಭಸಕ್ಕೆ ರಸ್ತೆಯ ವಿಭಜಕಕ್ಕೆ ಎಸೆಯಲ್ಪಟ್ಟ ಲೋಕೇಶ್ ಅವರು ತಲೆಗೆ ಗಂಭೀರ ಗಾಯಗೊಂಡು ನಗರದ ಎ.ಜೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಹಿಟ್ & ರನ್ ಪ್ರಕರಣ ದಾಖಲಿಸಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ನಿನ್ನೆ ರಾತ್ರಿಯೇ ಘಟನೆಗೆ ಕಾರಣವಾದ ಕಾರನ್ನ ವಶಕ್ಕೆ ಪಡೆದಿದ್ದು, ಪರಾರಿಯಾಗಿದ್ದ ಆರೋಪಿ ಅಪ್ರಾಪ್ತ ಚಾಲಕನನ್ನ ಸೋಮವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತ ಚಾಲಕ ತನ್ನ ತಂದೆಯ ಕಾರನ್ನ ಚಾಲನಾ ಪರವಾನಿಗೆ ಇಲ್ಲದೆ ಚಲಾಯಿಸುತ್ತಿದ್ದ ವೇಳೆ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಯನ್ನೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Ullal hit and run accident of traffic police constable, car driver minor boy who rammed over the constable and escaped the spot is now arrested by Ullal police in Mangalore.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm