ಬ್ರೇಕಿಂಗ್ ನ್ಯೂಸ್
04-10-22 03:04 pm Mangalore Correspondent ಕರಾವಳಿ
ಮಂಗಳೂರು, ಅ.4: ಪರೇಶ್ ಮೆಸ್ತಾ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಬಿ ರಿಪೋರ್ಟ್ ಹಾಕಿದ್ದಾರೆ. ಇದರೊಂದಿಗೆ ಸಾವಿನ ಮನೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತದೆ ಎಂಬುದು ಸಾಬೀತಾಗಿದೆ. ಸಾವಿನ ಮನೆಯನ್ನು ಚುನಾವಣಾ ಲಾಭಕ್ಕೆ ಬಳಸಿಕೊಳ್ಳುವುದು ಬಿಜೆಪಿ ಚಾಳಿಯಾಗಿದೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ, ಕಾಂಗ್ರೆಸ್ ಮುಖಂಡ ಯುಟಿ ಖಾದರ್ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಖಾದರ್, ಬಡ ಕುಟುಂಬದ ಮನೆಯ ಸಂಕಷ್ಟವನ್ನು ಬೀದಿಗೆ ತಂದು ರಾಜಕೀಯ ಮಾಡುವುದು ಬಿಜೆಪಿ ಚಾಳಿ. ಸಿಬಿಐ ಈಗ ರಿಪೋರ್ಟ್ ಕೊಟ್ಟಿದ್ದು ಈಗ ಸಂಸದ ಅನಂತ್ ಕುಮಾರ್ ಹೆಗ್ಡೆ ಎಲ್ಲಿ ಹೋಗಿದ್ದಾರೆ. ರಾಜಕೀಯ ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

ಸಾವನ್ನು ರಾಜಕೀಯವಾಗಿ ಬಳಸುವುದು ಬಿಜೆಪಿಯ ಚುನಾವಣಾ ತಂತ್ರಗಾರಿಕೆ. ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು ಹಿಂದಿನ ಕಾಂಗ್ರೆಸ್ ಸರಕಾರ. ಬಾವಿಯಲ್ಲಿ ಶವ ಪತ್ತೆಯಾಗಿದ್ದ ಘಟನೆಯ ಬಗ್ಗೆ ಬಿಜೆಪಿ ಮುಖಂಡರು ಇಲ್ಲ ಸಲ್ಲದ ಆರೋಪ ಮಾಡಿದ್ದರು. ಜನರನ್ನು ರೊಚ್ಚಿಗೆಬ್ಬಿಸಿ ಪೊಲೀಸ್ ವಾಹನಗಳಿಗೆ ಬೆಂಕಿ ಇಡುವಂತೆ ಪ್ರೇರೇಪಿಸಿದ್ದರು. ಪರೇಶ್ ಮೇಸ್ತಾ ಸಾವಿನ ಬಳಿಕ ಬಿಜೆಪಿ ಮುಖಂಡರು ಆತನ ಮನೆಗೆ ಸರಣಿಯಂತೆ ಭೇಟಿ ಕೊಟ್ಟು ಪ್ರವಾಸಿ ತಾಣ ಆಗಿಸಿದ್ದರು. ಇಲ್ಲ ಸಲ್ಲದ ಆರೋಪ, ಹೇಳಿಕೆ ನೀಡಿ ಅಧಿಕಾರಕ್ಕೆ ಬಂದ ಬಳಿಕ ಪರೇಶ್ ಮೇಸ್ತಾನ ಬಡ ಕುಟುಂಬವನ್ನು ಬಿಜೆಪಿ ನಾಯಕರು ಮರೆತಿದ್ದರು. ತಮ್ಮ ರಾಜಕೀಯ ಲಾಭಕ್ಕೆ ಬಳಸಿ ನಂತರ ಮರೆಯುವುದು ಬಿಜೆಪಿ ಮುಖಂಡರದ್ದು ಹಳೆ ಚಾಳಿ.
ಅಧಿಕಾರಕ್ಕೆ ಬಂದ ಬಳಿಕ ಒಬ್ಬ ಶಾಸಕನಾಗಲಿ, ಸಚಿವನಾಗಲಿ, ಸಂಸದರಾಗಲಿ ಮೇಸ್ತಾ ಮನೆಗೆ ಭೇಟಿ ನೀಡಿಲ್ಲ. ಸಂಕಷ್ಟದಲ್ಲಿದ್ದ ಮೇಸ್ತಾ ಕುಟುಂಬಕ್ಕೆ ಆರ್ಥಿಕ ಸಹಾಯವನ್ನೂ ಮಾಡಿಲ್ಲ. ಪ್ರತಿ ಸಾವಿನಲ್ಲಿ ರಾಜಕೀಯ ಮಾಡುವುದು ಬಿಜೆಪಿ ಬೆಳೆಸಿಕೊಂಡು ಬಂದ ಚಾಳಿ. ಇನ್ನು ಐದಾರು ತಿಂಗಳಲ್ಲಿ ಚುನಾವಣೆ ಬರಲಿದೆ. ಈ ರೀತಿಯ ಸಾವಿನ ರಾಜಕೀಯ ನಡೆಸುವ ಪ್ರಯತ್ನ ಬಿಜೆಪಿಗರಿಂದ ಮುಂದುವರಿಯಲಿದೆ. ಜನರು ಬಿಜೆಪಿ ನಾಯಕರ ರಾಜಕೀಯದ ಬಗ್ಗೆ ಗಂಭೀರ ಯೋಚಿಸ ಬೇಕಾಗಿದೆ. ಚುನಾವಣಾ ಸಂದರ್ಭದಲ್ಲಿ ಇವರ ರಾಜಕೀಯ ತೆವಲುಗಳ ಬಗ್ಗೆ ಜನರು ಜಾಗೃತರಾಗ ಬೇಕಾಗಿದೆ ಎಂದು ಯು.ಟಿ ಖಾದರ್ ಹೇಳಿದ್ದಾರೆ.
Bjp has played dirty game even in the death of Paresh Mesta slams UT Khader in Mangalore. Despite preliminary reports suggesting that Paresh Mesta, 18, died of accidental drowning, the death was projected by the BJP as the communal murder of a Sangh Parivar worker by a Muslim gang.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am