ಬ್ರೇಕಿಂಗ್ ನ್ಯೂಸ್
05-10-22 11:01 pm Mangalore Correspondent ಕರಾವಳಿ
ಮಂಗಳೂರು, ಅ.5 : ಎರಡು ವರ್ಷಗಳಲ್ಲಿ ಕೊರೊನಾ ಇದ್ದ ಕಾರಣವೋ ಏನೋ.. ಈ ಬಾರಿ ಮಂಗಳೂರು ದಸರಾಕ್ಕೆ ಸಂಜೆಯಾಗುತ್ತಲೇ ಕಾಲಿಡಲು ಜಾಗ ಇರಲಿಲ್ಲ. ಅದ್ದೂರಿತನಕ್ಕೆ ಮತ್ತೊಂದು ಹೆಸರು ಎನ್ನುವಂತೆ ನಡೆದುಬಂದ ಮಂಗಳೂರು ದಸರಾಕ್ಕೆ ಈ ಬಾರಿ ಎಣೆಯೇ ಇರಲಿಲ್ಲ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಒಂಬತ್ತು ದಿನಗಳ ಕಾಲ ಪೂಜೆಗೊಳ್ಳುವ ನವದುರ್ಗೆಯರು ಮತ್ತು ಶಾರದೆ, ಗಣಪತಿಯ ವಿಗ್ರಹದ ಮೆರವಣಿಗೆ ವಿಜಯದಶಮಿಯ ದಿನ ಎಂದಿನಂತೆ ಅದ್ದೂರಿಯಾಗಿ ನಡೆಯಿತು. ಕುದ್ರೋಳಿ ಕ್ಷೇತ್ರದಲ್ಲಿ ದೇವಸ್ಥಾನದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸಂಜೆ ಐದು ಗಂಟೆ ವೇಳೆಗೆ ಮೆರವಣಿಗೆ ಆರಂಭಗೊಂಡರೂ, ಶೋಭಾಯಾತ್ರೆಗೆ ಸ್ತಬ್ಧಚಿತ್ರಗಳು ಸಾಥ್ ನೀಡಲಿಲ್ಲ. ಈ ಹಿಂದೆಲ್ಲ ನವದುರ್ಗೆಯರ ಮೆರವಣಿಗೆಗೂ ಮುಂದಿನಿಂದ ಇತರೇ ಸ್ತಬ್ಧಚಿತ್ರಗಳು ಸಾಗಿ ಬರುತ್ತಿದ್ದವು. ಮಣ್ಣಗುಡ್ಡ, ಲೇಡಿಹಿಲ್ ನಲ್ಲಿ ಮೆರವಣಿಗೆ ಸೇರುತ್ತಿದ್ದ ಸ್ತಬ್ಧಚಿತ್ರಗಳು ಈ ಬಾರಿ ದೇವರ ವಿಗ್ರಹದ ಮುಂದಿನಿಂದ ಸಾಗಿ ಬರಲಿಲ್ಲ.












ಸಾವಿರಾರು ಜನರು ಸಂಜೆಯೇ ಲಾಲ್ ಬಾಗ್, ಬಳ್ಳಾಲ್ ಬಾಗ್ ನಲ್ಲಿ ಬಂದು ನಿಂತಿದ್ದರೂ ರಾತ್ರಿ ಹತ್ತುವರೆ ಕಳೆದರೂ ಮೆರವಣಿಗೆ ಲಾಲ್ ಬಾಗ್ ಬಂದು ತಲುಪಲಿಲ್ಲ. ಹೀಗಾಗಿ ಜನರು ಕಾದು ನಿರಾಶೆಯಾಗಿದ್ದರು. ಶಾರದೆಯ ಜೊತೆಗೆ ಸಾಗಬೇಕೆಂಬ ಕೆಲವು ತಂಡಗಳ ಧಾವಂತ, ಕೆಲವರ ಪ್ರತಿಷ್ಠೆಗಳು ಮೇಳೈಸಿದ ಕಾರಣ ಜನರು ರಾತ್ರಿಯಾದರೂ ಸ್ತಬ್ಧಚಿತ್ರಗಳು ನೋಡಲು ಸಿಗಲಿಲ್ಲ. ಹತ್ತು ಗಂಟೆ ವೇಳೆಗೆ ಲೇಡಿಹಿಲ್, ಲಾಲ್ ಬಾಗ್ ವೃತ್ತದಿಂದ ಬಳ್ಳಾಲ್ ಬಾಗ್ ಪಿವಿಸ್ ಉದ್ದಕ್ಕೆ ಲಕ್ಷಾಂತರ ಜನರು ಸೇರಿದ್ದರು. ಇದೇ ಮೊದಲ ಬಾರಿಗೆ ಎನ್ನುವಂತೆ ಈ ಪರಿ ಜನರು ಸೇರಿದ್ದರು.




ಸ್ಥಳೀಯರಲ್ಲದೆ, ಹೊರ ರಾಜ್ಯಗಳ ಕಾರ್ಮಿಕರು, ಉತ್ತರ ಭಾರತದ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು. ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಲ್ಲಿ ದಸರಾ ಶೋಭಾಯಾತ್ರೆಗೆ ಎಂದಿನ ವೈಭವ ಇರಲಿಲ್ಲ. ಹೀಗಾಗಿ ಜನರು ಮೈಸೂರು ದಸರಾಕ್ಕಿಂತಲೂ ಹೆಚ್ಚೆಂಬಂತೆ ಸೇರಿದ್ದರು.
Kudroli Dasara in Mangalore, lakhs of people gather for celebration.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm