ಬ್ರೇಕಿಂಗ್ ನ್ಯೂಸ್
06-10-22 10:44 pm Mangalore Correspondent ಕರಾವಳಿ
ಮಂಗಳೂರು, ಅ.6 : ನಗರದ ರಥಬೀಬಿಯ ವೆಂಕಟರಮಣ ದೇವಸ್ಥಾನದಲ್ಲಿ 100ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ನಡೆದಿದ್ದು ಹತ್ತು ದಿನಗಳ ಪೂಜೆಯ ಬಳಿಕ ಗುರುವಾರ ವಿಸರ್ಜನಾ ಮೆರವಣಿಗೆ ನಡೆಸಲಾಯಿತು.
ವೆಂಕಟರಮಣ ದೇವಸ್ಥಾನದ ಆವರಣದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನೂರು ವರ್ಷಗಳಿಂದ ನಡೆಸಿಕೊಂಡು ಬಂದ ಶಾರದಾ ಮಹೋತ್ಸವಕ್ಕೆ ಈ ಬಾರಿ ಶತಮಾನೋತ್ಸವದ ಸಂಭ್ರಮವಾಗಿತ್ತು. ಸ್ವಾತಂತ್ರ್ಯಕ್ಕೂ ಮೊದಲೇ ದೇಶದ ಜನರನ್ನು ಏಕೀಕರಿಸುವ ಉದ್ದೇಶದಿಂದ ಜಿ.ಎಸ್.ಬಿ. ಸಮಾಜದ ಹಿರಿಯರ ದೂರದರ್ಶಿತ್ವ ಮತ್ತು ಕಲ್ಪನೆಯ ಕೂಸು ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಆಗಿತ್ತು. ಅಂದಿನಿ೦ದ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು ಮಣ್ಣಿನಲ್ಲಿ ರಚಿಸಿ, ದೇವರ ಸ್ವರೂಪದಲ್ಲಿ ಪೂಜಿಸಲು ಆರಂಭಿಸಲಾಗಿತ್ತು.


ಹತ್ತು ದಿನಗಳ ಪರ್ಯಂತ ಶ್ರೀ ಮಾತೆಯ ವಿಗ್ರಹಕ್ಕೆ ದೇವಿಯ ವಿವಿಧ ಅವತಾರಗಳ ಅಲಂಕಾರಗಳ ಮಾಡಲಾಗಿತ್ತು. ವಿಜಯದಶಮಿ ಪ್ರಯುಕ್ತ ಗುರುವಾರ ರಾತ್ರಿ ಕೊನೆಯ ಪೂಜೆ ನಡೆದು ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ಬಳಿಕ ರಾತ್ರಿ 10 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆ ಹೊರಟಿತ್ತು. ಮೆರವಣಿಗೆ ಹೊರಟು ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್, ಬಸವನ ಗುಡಿ, ಚಾಮರಗಲ್ಲಿ ರಥಬೀದಿಯಾಗಿ ಬಂದು ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜಿಸುವುದು ಸಂಪ್ರದಾಯ.


ಸ್ವಯಂಸೇವಕರು ಭಜನಾ ಸೇವೆಯ ಮೂಲಕ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ವೇಷಧಾರಿಗಳಿಂದ ವಿಶೇಷ ಟ್ಯಾಬ್ಲೋಗಳು, ಹರಕೆಯ ಶಾರದಾ ಹುಲಿವೇಷದ ಟ್ಯಾಬ್ಲೋಗಳು ಜನಾಕರ್ಷಣೆ ಗಿಟ್ಟಿಸಿದವು.
100th year Sharada Mahotsava at Rathabidi begins in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm