ಬ್ರೇಕಿಂಗ್ ನ್ಯೂಸ್
06-10-22 10:44 pm Mangalore Correspondent ಕರಾವಳಿ
ಮಂಗಳೂರು, ಅ.6 : ನಗರದ ರಥಬೀಬಿಯ ವೆಂಕಟರಮಣ ದೇವಸ್ಥಾನದಲ್ಲಿ 100ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ನಡೆದಿದ್ದು ಹತ್ತು ದಿನಗಳ ಪೂಜೆಯ ಬಳಿಕ ಗುರುವಾರ ವಿಸರ್ಜನಾ ಮೆರವಣಿಗೆ ನಡೆಸಲಾಯಿತು.
ವೆಂಕಟರಮಣ ದೇವಸ್ಥಾನದ ಆವರಣದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನೂರು ವರ್ಷಗಳಿಂದ ನಡೆಸಿಕೊಂಡು ಬಂದ ಶಾರದಾ ಮಹೋತ್ಸವಕ್ಕೆ ಈ ಬಾರಿ ಶತಮಾನೋತ್ಸವದ ಸಂಭ್ರಮವಾಗಿತ್ತು. ಸ್ವಾತಂತ್ರ್ಯಕ್ಕೂ ಮೊದಲೇ ದೇಶದ ಜನರನ್ನು ಏಕೀಕರಿಸುವ ಉದ್ದೇಶದಿಂದ ಜಿ.ಎಸ್.ಬಿ. ಸಮಾಜದ ಹಿರಿಯರ ದೂರದರ್ಶಿತ್ವ ಮತ್ತು ಕಲ್ಪನೆಯ ಕೂಸು ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಆಗಿತ್ತು. ಅಂದಿನಿ೦ದ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು ಮಣ್ಣಿನಲ್ಲಿ ರಚಿಸಿ, ದೇವರ ಸ್ವರೂಪದಲ್ಲಿ ಪೂಜಿಸಲು ಆರಂಭಿಸಲಾಗಿತ್ತು.


ಹತ್ತು ದಿನಗಳ ಪರ್ಯಂತ ಶ್ರೀ ಮಾತೆಯ ವಿಗ್ರಹಕ್ಕೆ ದೇವಿಯ ವಿವಿಧ ಅವತಾರಗಳ ಅಲಂಕಾರಗಳ ಮಾಡಲಾಗಿತ್ತು. ವಿಜಯದಶಮಿ ಪ್ರಯುಕ್ತ ಗುರುವಾರ ರಾತ್ರಿ ಕೊನೆಯ ಪೂಜೆ ನಡೆದು ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ಬಳಿಕ ರಾತ್ರಿ 10 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆ ಹೊರಟಿತ್ತು. ಮೆರವಣಿಗೆ ಹೊರಟು ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್, ಬಸವನ ಗುಡಿ, ಚಾಮರಗಲ್ಲಿ ರಥಬೀದಿಯಾಗಿ ಬಂದು ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜಿಸುವುದು ಸಂಪ್ರದಾಯ.


ಸ್ವಯಂಸೇವಕರು ಭಜನಾ ಸೇವೆಯ ಮೂಲಕ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ವೇಷಧಾರಿಗಳಿಂದ ವಿಶೇಷ ಟ್ಯಾಬ್ಲೋಗಳು, ಹರಕೆಯ ಶಾರದಾ ಹುಲಿವೇಷದ ಟ್ಯಾಬ್ಲೋಗಳು ಜನಾಕರ್ಷಣೆ ಗಿಟ್ಟಿಸಿದವು.
100th year Sharada Mahotsava at Rathabidi begins in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm