ಬ್ರೇಕಿಂಗ್ ನ್ಯೂಸ್
08-10-22 05:13 pm Mangalore Correspondent ಕರಾವಳಿ
ಮಂಗಳೂರು, ಅ.8 : ನಮೀಬಿಯಾದಿಂದ ಭಾರತಕ್ಕೆ ತರಲಾಗಿರುವ ಚೀತಾ ಗರ್ಭಿಣಿಯಾದ ಸುದ್ದಿಗೆ ಗರ್ಭಿಣಿ ಮಹಿಳೆಯೊಬ್ಬರ ಪೋಟೋವನ್ನು ಪೋಟೋಶಾಪ್ ಮಾಡಿ ಮುಖಕ್ಕೆ ಚಿರತೆ ಮುಖವನ್ನು ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಇವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರ ದೇಹಕ್ಕೆ ಚಿರತೆಯ ತಲೆ ಅಂಟಿಸಿ ವಿಕೃತವಾಗಿರುವ ಚಿತ್ರವನ್ನು ಹಂಚಿಕೊಂಡಿದ್ದಲ್ಲದೆ, ‘ನಮೀಬಿಯಾ ಚೀತಾಗೆ ಸೀಮಂತ ಯಾವಾಗ?’ ಎಂದು ಪ್ರಶ್ನೆ ಮಾಡಿದ್ದರು. ಇದು ಗರ್ಭಿಣಿ ಮಹಿಳೆ ಮತ್ತು ಭಾರತೀಯ ಸಂಸ್ಕೃತಿಗೆ ಮಾಡಿರುವ ಅವಹೇಳನ ಎಂದು ಆರೋಪಿಸಿ ಎಡಪದವು ಗ್ರಾಮದ ಮಹಿಳೆಯೊಬ್ಬರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಶುಕ್ರವಾರ ರಾತ್ರಿ ಸುನಿಲ್ ಬಜಿಲಕೇರಿ ಅವರನ್ನು ಬಂಧಿಸಿದ್ದರು. ಬಂಧನ ಕ್ರಮಕ್ಕೆ ಭಾರೀ ಖಂಡನೆಯೂ ವ್ಯಕ್ತವಾಗಿತ್ತು. ಶನಿವಾರ ಹಿರಿಯ ವಕೀಲ ಅರುಣ್ ಬಂಗೇರ ಬಂಧನ ಕ್ರಮವನ್ನು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು ಜಾಮೀನು ನೀಡುವಂತೆ ವಾದಿಸಿದ್ದಾರೆ. ಪೊಲೀಸರು ಮೂರು ದಿನ ಕಸ್ಟಡಿ ನೀಡಲು ಕೇಳಿಕೊಂಡಿದ್ದರು. ಆದರೆ ವಕೀಲರ ಮನವಿ ಪರಿಗಣಿಸಿ ನ್ಯಾಯಾಧೀಶರು ಜಾಮೀನು ನೀಡಿದ್ದಾರೆ.
ಉರ್ವಾ ಠಾಣೆ ವ್ಯಾಪ್ತಿಯ ಮನೆಯಿಂದ ಸುನೀಲ್ ಬಜಿಲಕೇರಿ ಅವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಸುನಿಲ್ ವಿರುದ್ಧ ಉರ್ವಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು ಐಪಿಸಿ ಸೆಕ್ಷನ್ 353 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Bajpe police arrested social worker Sunil Bajilakeri on the accusation of insulting pregnant women using the face of a leopard. Sunil is accused of writing derogatory comments along with the post.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm