ಬ್ರೇಕಿಂಗ್ ನ್ಯೂಸ್
09-10-22 06:21 pm Mangalore Correspondent ಕರಾವಳಿ
ಉಳ್ಳಾಲ, ಅ.9 : ಕಳೆದ ಸೆ.26 ರಂದು ಉಳ್ಳಾಲದ ಸೋಮೇಶ್ವರ ಕಡಲ ಕಿನಾರೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಾಸರಗೋಡು ಜಿಲ್ಲೆಯ ಕುಂಬ್ಳೆ ಸಮುದ್ರದಲ್ಲಿ ಪತ್ತೆಯಾಗಿತ್ತು. ಮೂರು ದಿವಸಗಳ ಬಳಿಕ ಶವದ ಗುರುತು ಪತ್ತೆಯಾಗದೆ ಕೋಸ್ಟ್ ಗಾರ್ಡ್ ಪೊಲೀಸರು ಮೃತದೇಹವನ್ನ ಹೂತು ದಫನ ಮಾಡಿದ್ದರು. ಇದೀಗ ಕುಟುಂಬಸ್ಥರು ಉಳ್ಳಾಲ ಠಾಣೆಯಲ್ಲಿ ದೂರು ನೀಡುತ್ತಿದ್ದಂತೆ ಶವದ ಗುರುತು ಪತ್ತೆಯಾಗಿದ್ದು ತನಿಖೆ ಆರಂಭಗೊಂಡಿದೆ.
ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಪಿಲಾರು ದಾರಂದ ಬಾಗಿಲು ನಿವಾಸಿ ಝಾಕಿರ್ (36)ಯಾನೆ ಜಾಕಿ ಮೃತ ವ್ಯಕ್ತಿ. ಝಾಕಿರ್ ವಿವಾಹಿತನಾಗಿದ್ದು ಈ ಹಿಂದೆ ಮಂಗಳೂರಿನ ಧಕ್ಕೆಯಲ್ಲಿ ಸಹೋದರರ ಜೊತೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ವ್ಯವಹಾರದಲ್ಲಿ ಕೈ ಸುಟ್ಟು ಕೊಂಡಿದ್ದನೆನ್ನಲಾಗಿದೆ. ಝಾಕಿರ್ ಇತ್ತೀಚೆಗೆ ಖಿನ್ನತೆಗೊಳಗಾಗಿದ್ದು ಕಳೆದ ಸೆ.26 ರಂದು ಮನೆಯಿಂದ ಹೊರ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ. ಝಾಕಿರ್ ಚಲಾಯಿಸುತ್ತಿದ್ದ ಮೋಟಾರ್ ಬೈಕ್ ಮೊನ್ನೆ ಶುಕ್ರವಾರ ಸೋಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರು ನಿನ್ನೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸುವಾಗ ಝಾಕಿರ್ ಮೃತದೇಹ ಕುಂಬ್ಳೆಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.


ಕಳೆದ ಸೆ.28 ರಂದು ಕುಂಬ್ಳೆಯ ಆಳ ಸಮುದ್ರದಲ್ಲಿ ಝಾಕಿರ್ ಮೃತದೇಹ ಮೀನುಗಾರರಿಗೆ ದೊರಕಿತ್ತು. ಕೋಸ್ಟ್ ಗಾರ್ಡ್ ಪೊಲೀಸರು ಕೇಸು ದಾಖಲಿಸಿ ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದರು. ಕೊಳೆತಿದ್ದ ಮೃತದೇಹದ ಗುರುತು ಸಿಗದ ಕಾರಣ ಕೋಸ್ಟ್ ಗಾರ್ಡ್ ಪೊಲೀಸರು ಮೂರು ದಿವಸಗಳ ನಂತರ ಶವವನ್ನ ಹೂತು ದಫನಗೈದಿದ್ದಾರೆ.

ಈ ನಡುವೆ, ಝಾಕಿರ್ ಬೈಕ್ ಸೋಮೇಶ್ವರ ದೇವಸ್ಥಾನದ ಬಳಿ ದೊರಕಿದ್ದು ಆತ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕುಟುಂಬ ವರ್ಗದವರು ಮೃತ ಝಾಕಿರ್ ಮೃತದೇಹವನ್ನ ಮರಳಿ ತೆಗೆಸಿ, ಮನೆಗೆ ತರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಮೃತ ಝಾಕಿರ್ ಗೆ ಓರ್ವ ಪುತ್ರನಿದ್ದು, ಪತ್ನಿ ಮತ್ತೆ ಗರ್ಭಿಣಿಯಾಗಿದ್ದಾರೆ.
Mangalore Ullal missing man body found in kumble beach in kerala, depression suspected. The deceased has been identified as Zakir from Pilar. Zakir was married recently and was helping his brother in fishing business.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm