ಬ್ರೇಕಿಂಗ್ ನ್ಯೂಸ್
10-10-20 01:20 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 10: ಯೋಗಿ ಆದಿತ್ಯನಾಥ್ ಮಂಗಳೂರಿಗೆ ಬಂದರೆ ಮಸಿ ಬಳಿಯುತ್ತೇವೆ ಎಂದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿಕೆಗೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಈ ಬಗ್ಗೆ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.,ನಾಥ ಪರಂಪರೆ ಬಗ್ಗೆ ಸಮಾಜಕ್ಕೆ ಅಪಾರ ಗೌರವವಿದೆ. ಅಂತಹ ಉನ್ನತ ಪರಂಪರೆಯುಳ್ಳ ಪೂಜ್ಯರಾದ ಯೋಗಿ ಬಗ್ಗೆ ಮಿಥುನ್ ರೈ ಅವಹೇಳನ ಆಗುವ ರೀತಿ ಮಾತಾಡಿದ್ದಾರೆ. ಇದು ಮಿಥುನ್ ರೈ ಯೋಗ್ಯತೆಯನ್ನ ತೋರಿಸುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಬಾಯಿಗೆ ಬಂದ ರೀತಿ ಮಾತಾಡಲು ಕಾಂಗ್ರೆಸ್ನವರು ದಕ್ಷಿಣ ಕನ್ನಡ ಜಿಲ್ಲೆಯನ್ನ ಖರೀದಿಸಿಲ್ಲ. ಅತ್ಯಾಚಾರ ವಿಚಾರದ ಬಗ್ಗೆ ಪ್ರತಿಭಟನೆ ನಡೆಸುವುದಿದ್ದರೂ, ಕಾನೂನು ಮೇಲೆ ನಂಬಿಕೆ ಇರಲಿ. ಕಾನೂನು ಮೀರಿದ ವರ್ತನೆ ಸರಿಯಲ್ಲ. ಕಾನೂನು ಬಾಹಿರ ರೀತಿ ಪ್ರತಿಭಟನೆ ನಡೆಸುತ್ತಾರೆ. ಕಾನೂನು ಉಲ್ಲಂಘನೆ ಆಗುವ ರೀತಿ ಮಾತುಗಳನ್ನಾಡುತ್ತಾರೆ. ಅತ್ಯಾಚಾರ ವಿರೋಧಿಸಿ ಕಠಿಣ ಕಾನೂನು ಜಾರಿಗೆ ತಂದಿದ್ದು ಕೇಂದ್ರದ ಮೋದಿ ಸರ್ಕಾರ. ಇದು ಕಾಂಗ್ರೆಸಿನವರಿಗೆ ತಿಳಿದಿರಲಿ ಎಂದು ಸುದರ್ಶನ್ ಹೇಳಿದರು.
ಅಲ್ಲದೆ, ಕಾಂಗ್ರೆಸ್ ಪ್ರತಿಭಟನೆಯ ಹಿಂದೆ ರಾಜಕೀಯ ಉದ್ದೇಶ ಇದೆ. ಕೇರಳದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಕಾಂಗ್ರೆಸ್ ಮೌನ ವಹಿಸುತ್ತದೆ. ಅದರ ಬಗ್ಗೆ ಮಾತನಾಡಲ್ಲ. ಯಾಕಂದ್ರೆ ಅಲ್ಲಿ ಇವರ ಮಿತ್ರರದ್ದೇ ಆಡಳಿತ ಇದೆ. ಬಿಜೆಪಿ ಉತ್ತರ ಪ್ರದೇಶದ ಅತ್ಯಾಚಾರ ಘಟನೆಯನ್ನೂ ಖಂಡಿಸುತ್ತದೆ. ಮಿಥುನ್ ರೈ ಹೇಳಿಕೆಯನ್ನೂ ಬಿಜೆಪಿ ಖಂಡಿಸುತ್ತದೆ. ಇಂತಹ ಹೇಳಿಕೆಯನ್ನ ಕಾಂಗ್ರೆಸ್ ನಾಯಕರು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಬಿಜೆಪಿ ಕಾರ್ಯಕರ್ತರು ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಲಿದ್ದಾರೆ ಎಂದು ಸುದರ್ಶನ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಮಂಗಳೂರಿಗೆ ಬಂದರೆ ಮಸಿ ಬಳಿಯುತ್ತೇವೆ ; ಮಿಥುನ್ ರೈ
Dakshina Kannada Youth Congress president Mithun Rai had made offensive statements against UP CM Yogi affirming of throwing black ink during yogi visit to Mangalore for which District president Sudarshan has slammed Minthun rai over his culture.
30-01-26 05:00 pm
Bangalore Correspondent
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm