ಬ್ರೇಕಿಂಗ್ ನ್ಯೂಸ್
09-10-22 10:11 pm Mangalore Correspondent ಕರಾವಳಿ
ಮಂಗಳೂರು, ಅ.9 : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿಯೂ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 100 ರೂ. ಹಣ ತೆತ್ತು ಭಕ್ತರು ಸೌಲಭ್ಯ ಪಡೆಯಬಹುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ತಿರುಪತಿ ಸೇರಿದಂತೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಹಣ ತೆತ್ತು ವಿಶೇಷ ದರ್ಶನದ ವ್ಯವಸ್ಥೆ ಇದೆ. ಆದರೆ ಕರಾವಳಿಯಲ್ಲಿ ಅಂತಹ ಪದ್ಧತಿ ಇರಲಿಲ್ಲ. ಇದೀಗ ಮೊದಲ ಬಾರಿಗೆ ಕಟೀಲಿನಲ್ಲಿ ಅಂತಹ ವ್ಯವಸ್ಥೆ ತರಲಾಗಿದೆ. ನವರಾತ್ರಿ ಸಂದರ್ಭದಲ್ಲಿ ದೇವಸ್ಥಾನಕ್ಕೆ ಅತಿ ಹೆಚ್ಚು ಭಕ್ತರು ಆಗಮಿಸುತ್ತಾರೆ. ಇದರ ಬೆನ್ನಲ್ಲೇ ಹೊಸ ನಿಯಮವನ್ನು ಜಾರಿಗೆ ತರುವ ಬಗ್ಗೆ ಆಡಳಿತ ಕಮಿಟಿ ಪ್ರಕಟಣೆ ಹೊರಡಿಸಿದೆ.
ಇತ್ತೀಚೆಗೆ ಕಟೀಲಿನಲ್ಲಿ ವಾಹನ ಪಾರ್ಕಿಂಗ್ ಮೇಲೆ ದರ ವಿಧಿಸಲು ಆಡಳಿತ ಮಂಡಳಿ ತೀರ್ಮಾನಕ್ಕೆ ಬಂದಿತ್ತು. ಆದರೆ ಈ ರೀತಿಯ ನಿಯಮಕ್ಕೆ ಕ್ಷೇತ್ರದ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆನಂತರ, ಪಾರ್ಕಿಂಗ್ ಶುಲ್ಕದ ನಿರ್ಧಾರವನ್ನು ಹಿಂಪಡೆಯಲಾಗಿತ್ತು. ಇದೀಗ ಭಕ್ತರಿಗೆ ವಿಶೇಷ ದರ್ಶನಕ್ಕಾಗಿ ಹೆಚ್ಚುವರಿ ಶುಲ್ಕದ ವ್ಯವಸ್ಥೆಯನ್ನು ಮಾಡಲಾಗಿದೆ. ಅದರ ಮೂಲಕ ಸಿರಿವಂತರಿಗೆ ಶೀಘ್ರ ದರ್ಶನ ವ್ಯವಸ್ಥೆಗೆ ಕಟೀಲು ದೇವಸ್ಥಾನ ತೆರೆದುಕೊಂಡಿದೆ. ಈವರೆಗೂ ಸಾವಿರಾರು ಭಕ್ತರು ಬಂದರೂ ಯಾವುದೇ ನೂಕುನುಗ್ಗಲು ಇಲ್ಲದೆ ಸಾಗಿ ಬರುತ್ತಿದ್ದ ವ್ಯವಸ್ಥೆಯಲ್ಲಿ ಆಡಳಿತ ಮಂಡಳಿ ಹಣ ತೆತ್ತು ಶೀಘ್ರ ದರ್ಶನದ ವ್ಯವಸ್ಥೆ ಮಾಡಿದೆ.
ರಜಾದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತದೆ. ಹೀಗಾಗಿ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯಲು ಸಾಧ್ಯವಾಗದವರು ಶೀಘ್ರ ದರ್ಶನದ ವ್ಯವಸ್ಥೆ ಪಡೆಯಬಹುದು ಎಂದು ಕ್ಷೇತ್ರದ ಆಡಳಿತ ಮಂಡಳಿ ಸಮರ್ಥನೆ ಮಾಡಿಕೊಂಡಿದೆ. ಈ ರೀತಿಯ ನಿರ್ಧಾರಕ್ಕೆ ಟೀಕೆಯೂ ಬಂದಿದ್ದು ಹಣ ಮಾಡುವುದಕ್ಕಾಗಿ ಇಂತಹ ನಿರ್ಧಾರಕ್ಕೆ ಬಂದಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
Fast service implemented for darshan at Kateel Temple in Mangalore, 100 rupees charged.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm