ಬ್ರೇಕಿಂಗ್ ನ್ಯೂಸ್
09-10-22 10:11 pm Mangalore Correspondent ಕರಾವಳಿ
ಮಂಗಳೂರು, ಅ.9 : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿಯೂ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 100 ರೂ. ಹಣ ತೆತ್ತು ಭಕ್ತರು ಸೌಲಭ್ಯ ಪಡೆಯಬಹುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ತಿರುಪತಿ ಸೇರಿದಂತೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಹಣ ತೆತ್ತು ವಿಶೇಷ ದರ್ಶನದ ವ್ಯವಸ್ಥೆ ಇದೆ. ಆದರೆ ಕರಾವಳಿಯಲ್ಲಿ ಅಂತಹ ಪದ್ಧತಿ ಇರಲಿಲ್ಲ. ಇದೀಗ ಮೊದಲ ಬಾರಿಗೆ ಕಟೀಲಿನಲ್ಲಿ ಅಂತಹ ವ್ಯವಸ್ಥೆ ತರಲಾಗಿದೆ. ನವರಾತ್ರಿ ಸಂದರ್ಭದಲ್ಲಿ ದೇವಸ್ಥಾನಕ್ಕೆ ಅತಿ ಹೆಚ್ಚು ಭಕ್ತರು ಆಗಮಿಸುತ್ತಾರೆ. ಇದರ ಬೆನ್ನಲ್ಲೇ ಹೊಸ ನಿಯಮವನ್ನು ಜಾರಿಗೆ ತರುವ ಬಗ್ಗೆ ಆಡಳಿತ ಕಮಿಟಿ ಪ್ರಕಟಣೆ ಹೊರಡಿಸಿದೆ.
ಇತ್ತೀಚೆಗೆ ಕಟೀಲಿನಲ್ಲಿ ವಾಹನ ಪಾರ್ಕಿಂಗ್ ಮೇಲೆ ದರ ವಿಧಿಸಲು ಆಡಳಿತ ಮಂಡಳಿ ತೀರ್ಮಾನಕ್ಕೆ ಬಂದಿತ್ತು. ಆದರೆ ಈ ರೀತಿಯ ನಿಯಮಕ್ಕೆ ಕ್ಷೇತ್ರದ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆನಂತರ, ಪಾರ್ಕಿಂಗ್ ಶುಲ್ಕದ ನಿರ್ಧಾರವನ್ನು ಹಿಂಪಡೆಯಲಾಗಿತ್ತು. ಇದೀಗ ಭಕ್ತರಿಗೆ ವಿಶೇಷ ದರ್ಶನಕ್ಕಾಗಿ ಹೆಚ್ಚುವರಿ ಶುಲ್ಕದ ವ್ಯವಸ್ಥೆಯನ್ನು ಮಾಡಲಾಗಿದೆ. ಅದರ ಮೂಲಕ ಸಿರಿವಂತರಿಗೆ ಶೀಘ್ರ ದರ್ಶನ ವ್ಯವಸ್ಥೆಗೆ ಕಟೀಲು ದೇವಸ್ಥಾನ ತೆರೆದುಕೊಂಡಿದೆ. ಈವರೆಗೂ ಸಾವಿರಾರು ಭಕ್ತರು ಬಂದರೂ ಯಾವುದೇ ನೂಕುನುಗ್ಗಲು ಇಲ್ಲದೆ ಸಾಗಿ ಬರುತ್ತಿದ್ದ ವ್ಯವಸ್ಥೆಯಲ್ಲಿ ಆಡಳಿತ ಮಂಡಳಿ ಹಣ ತೆತ್ತು ಶೀಘ್ರ ದರ್ಶನದ ವ್ಯವಸ್ಥೆ ಮಾಡಿದೆ.
ರಜಾದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತದೆ. ಹೀಗಾಗಿ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯಲು ಸಾಧ್ಯವಾಗದವರು ಶೀಘ್ರ ದರ್ಶನದ ವ್ಯವಸ್ಥೆ ಪಡೆಯಬಹುದು ಎಂದು ಕ್ಷೇತ್ರದ ಆಡಳಿತ ಮಂಡಳಿ ಸಮರ್ಥನೆ ಮಾಡಿಕೊಂಡಿದೆ. ಈ ರೀತಿಯ ನಿರ್ಧಾರಕ್ಕೆ ಟೀಕೆಯೂ ಬಂದಿದ್ದು ಹಣ ಮಾಡುವುದಕ್ಕಾಗಿ ಇಂತಹ ನಿರ್ಧಾರಕ್ಕೆ ಬಂದಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
Fast service implemented for darshan at Kateel Temple in Mangalore, 100 rupees charged.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm