ಬ್ರೇಕಿಂಗ್ ನ್ಯೂಸ್
10-10-22 08:47 pm Mangalore Correspondent ಕರಾವಳಿ
ಉಳ್ಳಾಲ, ಅ.10 : ಕ್ಷುಲ್ಲಕ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆಸಿದ್ದಲ್ಲದೆ, ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಬಿಜೆಪಿ ಪುಢಾರಿ ಮತ್ತು ಪೊಲೀಸ್ ಸಿಬಂದಿಯೊಬ್ಬರು ಸೇರಿ ಹಲ್ಲೆಗೈದ ಘಟನೆ ಕೊಲ್ಯ ಬಳಿಯ ಕಣೀರು ತೋಟ ಎಂಬಲ್ಲಿ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ವಿಜಯಲಕ್ಷ್ಮಿ(43) ಹಲ್ಲೆಗೊಳಗಾದ ಮಹಿಳೆ. ನಿನ್ನೆ ರಾತ್ರಿ ವಿಜಯಲಕ್ಷ್ಮಿ ಅವರು ತಮ್ಮ ಮನೆಯ ಸಾಕು ನಾಯಿಗೆ ಅನ್ನ ಹಾಕುತ್ತಿದ್ದ ವೇಳೆ ಮನೆಯಂಗಳದ ಹೊರಗೆ ಸ್ಕೂಟರಲ್ಲಿ ತೆರಳುತ್ತಿದ್ದ ಸ್ಥಳೀಯ ಬಿಜೆಪಿ ಪುಢಾರಿ ಶೇಖರ್ ಕಣೀರ್ ತೋಟ ಎಂಬವರು ಕರ್ಕಷವಾಗಿ ಪದೇ ಪದೇ ಹಾರ್ನ್ ಹೊಡೆದಿದ್ದಾರೆ ಎನ್ನಲಾಗಿದೆ. ಹಾರ್ನ್ ಯಾಕ್ ಹೊಡೀತೀಯ ಎಂದು ವಿಜಯಲಕ್ಷ್ಮಿ ಅವರು ಶೇಖರ್ ಅವರಲ್ಲಿ ಪ್ರಶ್ನಿಸಿದ್ದಾರೆ. ಈ ವೇಳೆ, ಮಾತಿಗೆ ಮಾತು ಬೆಳೆದು ಶೇಖರ್ ಮತ್ತು ಸ್ಥಳೀಯ ನಿವಾಸಿ ಪಾಂಡೇಶ್ವರ ಪೊಲೀಸ್ ಠಾಣೆ ಸಿಬಂದಿ ನೂತನ್ ಕೊಲ್ಯ ಮತ್ತು ಇತರರು ವಿಜಯಲಕ್ಷ್ಮಿ ಅವರ ನಿವಾಸದ ಅಂಗಳಕ್ಕೆ ಬಂದಿದ್ದು ಮಹಿಳೆಯ ಕೈಎಳೆದು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮನೆಯೊಳಗಿದ್ದ ವಿಜಯಲಕ್ಷ್ಮಿ ಅವರ ಪತಿ ತೇಜ್ ಪಾಲ್, ಮಕ್ಕಳಾದ ಹಿತೇಶ್ ಮತ್ತು ಹರ್ಷ ಅವರು ಗಲಾಟೆ ತಡೆಯಲು ಬಂದಿದ್ದಾರೆ. ಜಟಾಪಟಿಯಲ್ಲಿ ವಿಜಯಲಕ್ಷ್ಮಿ ಮತ್ತು ಪತಿಯ ಮೇಲೆ ಹಲ್ಲೆ ನಡೆಸಲಾಗಿದ್ದು ವಿಜಯಲಕ್ಷ್ಮಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಳೆ ವೈಷಮ್ಯದಿಂದ ಹಲ್ಲೆ ಕೃತ್ಯ
ಸ್ಥಳೀಯ ಬಿಜೆಪಿ ಪುಢಾರಿ ಶೇಖರ್, ವಿಜಯಲಕ್ಷ್ಮಿ ಅವರ ನಡುವೆ ಹಿಂದಿನಿಂದಲೂ ವೈಷಮ್ಯ ಇತ್ತು. ವಿಜಯಲಕ್ಷ್ಮಿ ಅವರ ಮನೆಯ ಮುಂದೆ, ಶೇಖರ್ ತನ್ನ ಅತ್ತಿಗೆಗಾಗಿ ಮನೆಯನ್ನು ನಿರ್ಮಿಸಲು ಮುಂದಾಗಿದ್ದರು. ಶೇಖರ್ ನಿರ್ಮಿಸುತ್ತಿದ್ದ ಮನೆ ಕಾಮಗಾರಿಯನ್ನ ಅಕ್ರಮವೆಂದು ಕಾನೂನು ಹೋರಾಟ ನಡೆಸಿ ವಿಜಯಲಕ್ಷ್ಮಿ ತಡೆದಿದ್ದರು. ಇದರಿಂದ ಇವರ ನಡುವೆ ಹಿಂದಿನಿಂದಲೂ ವೈಷಮ್ಯ ಇತ್ತು. ಹಳೆ ವೈಷಮ್ಯದಲ್ಲಿ ಈಗ ಮಾತನಾಡಿಕೊಂಡು ಹಲ್ಲೆಗೂ ಯತ್ನಿಸಿದ್ದಾರೆ. ಘಟನೆ ಬಗ್ಗೆ ಶೇಖರ್, ಪೊಲೀಸ್ ಸಿಬಂದಿ ನೂತನ್ ಸೇರಿ ಐವರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Woman assaulted by police constable and BJP leader over horn matter in Ullal, Kolya resident Vijayalakshmi has been hospitalized after she suffered injuries. Bjp leader Shekar and Pandeshwara police station staff Nutan have assaulted women over silly reasons.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm