ಬ್ರೇಕಿಂಗ್ ನ್ಯೂಸ್
10-10-22 08:47 pm Mangalore Correspondent ಕರಾವಳಿ
ಉಳ್ಳಾಲ, ಅ.10 : ಕ್ಷುಲ್ಲಕ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆಸಿದ್ದಲ್ಲದೆ, ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಬಿಜೆಪಿ ಪುಢಾರಿ ಮತ್ತು ಪೊಲೀಸ್ ಸಿಬಂದಿಯೊಬ್ಬರು ಸೇರಿ ಹಲ್ಲೆಗೈದ ಘಟನೆ ಕೊಲ್ಯ ಬಳಿಯ ಕಣೀರು ತೋಟ ಎಂಬಲ್ಲಿ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ವಿಜಯಲಕ್ಷ್ಮಿ(43) ಹಲ್ಲೆಗೊಳಗಾದ ಮಹಿಳೆ. ನಿನ್ನೆ ರಾತ್ರಿ ವಿಜಯಲಕ್ಷ್ಮಿ ಅವರು ತಮ್ಮ ಮನೆಯ ಸಾಕು ನಾಯಿಗೆ ಅನ್ನ ಹಾಕುತ್ತಿದ್ದ ವೇಳೆ ಮನೆಯಂಗಳದ ಹೊರಗೆ ಸ್ಕೂಟರಲ್ಲಿ ತೆರಳುತ್ತಿದ್ದ ಸ್ಥಳೀಯ ಬಿಜೆಪಿ ಪುಢಾರಿ ಶೇಖರ್ ಕಣೀರ್ ತೋಟ ಎಂಬವರು ಕರ್ಕಷವಾಗಿ ಪದೇ ಪದೇ ಹಾರ್ನ್ ಹೊಡೆದಿದ್ದಾರೆ ಎನ್ನಲಾಗಿದೆ. ಹಾರ್ನ್ ಯಾಕ್ ಹೊಡೀತೀಯ ಎಂದು ವಿಜಯಲಕ್ಷ್ಮಿ ಅವರು ಶೇಖರ್ ಅವರಲ್ಲಿ ಪ್ರಶ್ನಿಸಿದ್ದಾರೆ. ಈ ವೇಳೆ, ಮಾತಿಗೆ ಮಾತು ಬೆಳೆದು ಶೇಖರ್ ಮತ್ತು ಸ್ಥಳೀಯ ನಿವಾಸಿ ಪಾಂಡೇಶ್ವರ ಪೊಲೀಸ್ ಠಾಣೆ ಸಿಬಂದಿ ನೂತನ್ ಕೊಲ್ಯ ಮತ್ತು ಇತರರು ವಿಜಯಲಕ್ಷ್ಮಿ ಅವರ ನಿವಾಸದ ಅಂಗಳಕ್ಕೆ ಬಂದಿದ್ದು ಮಹಿಳೆಯ ಕೈಎಳೆದು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮನೆಯೊಳಗಿದ್ದ ವಿಜಯಲಕ್ಷ್ಮಿ ಅವರ ಪತಿ ತೇಜ್ ಪಾಲ್, ಮಕ್ಕಳಾದ ಹಿತೇಶ್ ಮತ್ತು ಹರ್ಷ ಅವರು ಗಲಾಟೆ ತಡೆಯಲು ಬಂದಿದ್ದಾರೆ. ಜಟಾಪಟಿಯಲ್ಲಿ ವಿಜಯಲಕ್ಷ್ಮಿ ಮತ್ತು ಪತಿಯ ಮೇಲೆ ಹಲ್ಲೆ ನಡೆಸಲಾಗಿದ್ದು ವಿಜಯಲಕ್ಷ್ಮಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಳೆ ವೈಷಮ್ಯದಿಂದ ಹಲ್ಲೆ ಕೃತ್ಯ
ಸ್ಥಳೀಯ ಬಿಜೆಪಿ ಪುಢಾರಿ ಶೇಖರ್, ವಿಜಯಲಕ್ಷ್ಮಿ ಅವರ ನಡುವೆ ಹಿಂದಿನಿಂದಲೂ ವೈಷಮ್ಯ ಇತ್ತು. ವಿಜಯಲಕ್ಷ್ಮಿ ಅವರ ಮನೆಯ ಮುಂದೆ, ಶೇಖರ್ ತನ್ನ ಅತ್ತಿಗೆಗಾಗಿ ಮನೆಯನ್ನು ನಿರ್ಮಿಸಲು ಮುಂದಾಗಿದ್ದರು. ಶೇಖರ್ ನಿರ್ಮಿಸುತ್ತಿದ್ದ ಮನೆ ಕಾಮಗಾರಿಯನ್ನ ಅಕ್ರಮವೆಂದು ಕಾನೂನು ಹೋರಾಟ ನಡೆಸಿ ವಿಜಯಲಕ್ಷ್ಮಿ ತಡೆದಿದ್ದರು. ಇದರಿಂದ ಇವರ ನಡುವೆ ಹಿಂದಿನಿಂದಲೂ ವೈಷಮ್ಯ ಇತ್ತು. ಹಳೆ ವೈಷಮ್ಯದಲ್ಲಿ ಈಗ ಮಾತನಾಡಿಕೊಂಡು ಹಲ್ಲೆಗೂ ಯತ್ನಿಸಿದ್ದಾರೆ. ಘಟನೆ ಬಗ್ಗೆ ಶೇಖರ್, ಪೊಲೀಸ್ ಸಿಬಂದಿ ನೂತನ್ ಸೇರಿ ಐವರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Woman assaulted by police constable and BJP leader over horn matter in Ullal, Kolya resident Vijayalakshmi has been hospitalized after she suffered injuries. Bjp leader Shekar and Pandeshwara police station staff Nutan have assaulted women over silly reasons.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm