ಬ್ರೇಕಿಂಗ್ ನ್ಯೂಸ್
11-10-22 09:28 pm Mangalore Correspondent ಕರಾವಳಿ
ಮಂಗಳೂರು, ಅ.11: ವಾಮಂಜೂರಿನಲ್ಲಿ ಶಾರದೋತ್ಸವ ಆಚರಣೆಯ ನಿಮಿತ್ತ ಹಾಕಿದ್ದ ಬ್ಯಾನರ್ ಗಳನ್ನು ಹರಿದು ಹಾಕಿದ್ದ ಘಟನೆ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿತ್ತು. ವಿರೋಧಿ ಕೋಮಿನ ಕಿಡಿಗೇಡಿಗಳು ಕೃತ್ಯ ಎಸಗಿದ್ದರು ಅನ್ನುವ ರೀತಿಯೂ ಬಿಂಬಿತವಾಗಿತ್ತು. ರಾತ್ರೋರಾತ್ರಿ ಬ್ಯಾನರ್ ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಇದರ ಬೆನ್ನಲ್ಲೇ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಮೂವರು ಕಿಡಿಗೇಡಿ ಯುವಕರನ್ನು ಬಂಧಿಸಿದ್ದಾರೆ. ಗುರುಪುರ ಆಸುಪಾಸಿನ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ ಮತ್ತು ಪ್ರವೀಣ್ ಪೂಜಾರಿ ಎಂಬ ಮೂವರನ್ನು ಬಂಧಿಸಿದ್ದು, ಅವರು ಬಳಸಿದ್ದ ಸ್ವಿಫ್ಟ್ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.8ರ ಮಧ್ಯರಾತ್ರಿ 1.30ರಿಂದ ಎರಡು ಗಂಟೆ ಮಧ್ಯದಲ್ಲಿ ಯುವಕರು ಕೃತ್ಯ ಎಸಗಿದ್ದರು. ರಸ್ತೆ ಬದಿ ಹಾಕಿದ್ದ ಫ್ಲೆಕ್ಸನ್ನು ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿದ್ದರಿಂದ ಪೊಲೀಸರು ಅದನ್ನೇ ಆಧರಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.



ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದಳ್ಳುರಿ ನಡೆದಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಉಂಟಾದ ಉದ್ವಿಗ್ನ ಸ್ಥಿತಿ ಮತ್ತೊಬ್ಬನ ಕೊಲೆಯೊಂದಿಗೆ ಅವಸಾನ ಆಗಿತ್ತು. ಇದೀಗ ರಾತ್ರೋರಾತ್ರಿ ಶಾರದೋತ್ಸವಕ್ಕೆ ಹಾಕಿದ್ದ ಬ್ಯಾನರನ್ನು ಹರಿದು ಹಾಕಿದ್ದು ಇನ್ನೊಂದು ಕೋಮಿನವರು ಉದ್ದೇಶ ಪೂರ್ವಕ ನಡೆಸಿದ ಕೃತ್ಯ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದು, ಸಂಘಟನೆಯ ಒಳಗಿನ ವೈಮನಸ್ಸಿನಿಂದಲೇ ಈ ರೀತಿ ಕೃತ್ಯ ಎಸಗಿದ್ದರು ಅನ್ನೋದು ತಿಳಿದುಬಂದಿದೆ. ಯುವಕರು ಯಾಕಾಗಿ ಇಂತಹ ಕೃತ್ಯ ಎಸಗಿದ್ದಾರೆ, ಇದರ ಹಿಂದೆ ಕೋಮು ದ್ವೇಷ ಹರಡುವ ಉದ್ದೇಶ ಇತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಮಂಜೂರಿನಲ್ಲಿ ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ; ಮತ್ತೆ ಶಾಂತಿ ಕದಡಲು ಯತ್ನ
The city police have detained three persons on Tuesday, October 11, in connection with tearing a flex hung at a public place by Vamanjoor Friends' Association for Sharadotsav.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm