ಬ್ರೇಕಿಂಗ್ ನ್ಯೂಸ್
12-10-22 07:07 pm Mangalore Correspondent ಕರಾವಳಿ
ಉಳ್ಳಾಲ, ಅ.12: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಿಂದ ಅಚಾನಕ್ಕಾಗಿ ಸಮುದ್ರಕ್ಕೆ ಬಿದ್ದ ವ್ಯಕ್ತಿಯನ್ನ ಸ್ಥಳದಲ್ಲೇ ಇದ್ದ ವಿದೇಶಿ ಪ್ರವಾಸಿಗನೊಬ್ಬ ರಕ್ಷಿಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಅಸ್ವಸ್ಥಗೊಂಡ ವ್ಯಕ್ತಿಯನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮೇಶ್ವರ ರೈಲ್ವೇ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಚೆಟ್ಟಿಯಾರ್(41) ರಕ್ಷಿಸಲ್ಪಟ್ಟ ವ್ಯಕ್ತಿ. ಇಂದು ಮಧ್ಯಾಹ್ನದ ವೇಳೆ ಪ್ರವೀಣ್ ಅವರು ಸೋಮೇಶ್ವರ ಕಡಲ ತೀರದ ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲೇ ಮೀನಿಗೆ ಗಾಳ ಹಾಕುತ್ತಿದ್ದ ಸ್ವೀಡನ್ ದೇಶದ ಪ್ರವಾಸಿಗ ಆ್ಯಡಮ್ ಎಂಬಾತ ತಕ್ಷಣ ಸಮುದ್ರಕ್ಕೆ ಧುಮುಕಿ ಪ್ರವೀಣನ್ನ ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ನೀರು ಕುಡಿದು ತೀವ್ರ ಅಸ್ವಸ್ಥಗೊಂಡಿದ್ದ ಪ್ರವೀಣ ಅವರನ್ನು ಸ್ಥಳೀಯರು ಸೇರಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರವೀಣ್ ಅವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರವೀಣ್ ಪ್ರಾಣ ರಕ್ಷಿಸಿದ ವಿದೇಶಿ ಪ್ರಜೆ ಆ್ಯಡಮ್ ಅವರ ಕಾರ್ಯದ ಬಗ್ಗೆ ಸ್ಥಳೀಯರು ಮತ್ತು ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಂದೂವರೆ ತಿಂಗಳ ಭಾರತ ದೇಶದ ಪ್ರವಾಸದಲ್ಲಿರುವ ಆ್ಯಡಮ್ ಅವರು ಚೆನ್ನೈ ಇನ್ನಿತರ ಬೀಚ್ ಗಳಿಗೆ ಭೇಟಿ ನೀಡಿದ್ದು ನಿನ್ನೆ ಸೋಮೇಶ್ವರ ಬೀಚ್ ಆಗಮಿಸಿದ್ದು ಪ್ರವೀಣ್ ಪಾಲಿಗೆ ಆಪತ್ಬಾಂಧವನಾಗಿದ್ದಾರೆ.

ಸೋಮೇಶ್ವರ ಬೀಚಲ್ಲಿ ಆತ್ಮಹತ್ಯೆ, ನೀರಪಾಲಾಗುವ ಅವಘಡ ನಿರಂತರ ಆಗುತ್ತಿರುತ್ತದೆ. ಅನೇಕ ಸಂದರ್ಭಗಳಲ್ಲಿ ಇಲ್ಲಿ ಸಮುದ್ರ ಪಾಲಾಗುತ್ತಿದ್ದವರನ್ನ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರವಾಸೋದ್ಯಮ ಇಲಾಖೆಯು ಈ ಪ್ರದೇಶದಲ್ಲಿ ಖಾಯಂ ಜೀವರಕ್ಷಕ ಸಿಬ್ಬಂದಿಗಳನ್ನ ನೇಮಿಸದೆ ನಿರ್ಲಕ್ಷ ವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Man saved from drowning by foreign national at Someshwara beach at Ullal in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm