ಬ್ರೇಕಿಂಗ್ ನ್ಯೂಸ್
10-10-20 05:51 pm Mangaluru Correspondent ಕರಾವಳಿ
ಮಂಗಳೂರು, ಅ.10: ನವರಾತ್ರಿ ವೇಳೆ ಹುಲಿವೇಷಗಳ ಅಬ್ಬರ ಕಾಮನ್. ಆದರೆ ಈ ಬಾರಿ ಕೊರೊನಾ ಕಾರಣದಿಂದ ಹುಲಿವೇಷ ಕುಣಿತಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದು ಕರಾವಳಿಯಲ್ಲಿ ಹುಲಿವೇಷ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹುಲಿವೇಷ ಆಡಂಬರಕ್ಕಲ್ಲ. ಅದು ತುಳುನಾಡಿನ ಸಂಸ್ಕೃತಿ. ಹಾಗಾಗಿ ಕೊರೊನಾ ಕಾರಣಕ್ಕೆ ಹುಲಿವೇಷ ನಿಲ್ಲಿಸಬಾರದು. ಸರಳ ರೀತಿಯಲ್ಲಿ ದೇವರ ಸೇವೆಗೆ ಹುಲಿವೇಷ ತಂಡಗಳಿಗೆ ಅವಕಾಶ ನೀಡಬೇಕು ಎಂದು ಮಂಗಳಾದೇವಿ ದಸರಾ ಶೋಭಾಯಾತ್ರೆ ಸಮಿತಿ ಒತ್ತಾಯಿಸಿದೆ.
ಸಮಿತಿಯ ಅಧ್ಯಕ್ಷ ದಿಲ್ರಾಜ್ ಆಳ್ವ ಸುದ್ದಿಗೋಷ್ಟಿಯಲ್ಲಿ ಈ ಒತ್ತಾಯ ಮಾಡಿದ್ದು, ಜಿಲ್ಲಾಡಳಿತ ಕೋವಿಡ್ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತಕ್ಕೆ ನಿಷೇಧ ಹೇರಿದ್ದು ಸರಿಯಲ್ಲ. ಮಂಗಳಾದೇವಿ ಉತ್ಸವದ ಸಮಯದಲ್ಲಿ ಹಿಂದಿನಿಂದಲೂ ರಥೋತ್ಸವಕ್ಕೆ ಹುಲಿವೇಷ ಹಾಕುವ ಸಂಪ್ರದಾಯ ಇದೆ. ಈ ಸಂಪ್ರದಾಯವನ್ನು ನಿಲ್ಲಿಸುವಂತೆ ಆಗಬಾರದು. ಸಾಂಕೇತಿಕವಾಗಿ ದೇವರ ಸೇವೆ ನಡೆಸಲು ಅವಕಾಶ ನೀಡಬೇಕು. ಹುಲಿವೇಷವನ್ನು ವ್ರತ ಹಿಡಿದು ನಡೆಸುವ ಮಂದಿ ಇದ್ದಾರೆ. ಪ್ರತಿ ವರ್ಷವೂ ವೇಷ ಹಾಕುವವರೂ ಇದ್ದಾರೆ. ನವರಾತ್ರಿಗೂ ಹುಲಿವೇಷಕ್ಕೂ ಹತ್ತಿರದ ನಂಟು ಇದ್ದು ಭಾವನಾತ್ಮಕ ವಿಚಾರವಾಗಿದೆ ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷ ದಿನೇಶ್ ಕುಂಪಲ ಮಾತನಾಡಿ, ಈ ಬಾರಿ ಹುಲಿವೇಷ ಕೇವಲ ಹರಕೆ ಮಾತ್ರಕ್ಕೆ ನಡೆಸಲಾಗುವುದು. ಯಾವುದೇ ಆದಾಯ ಗಳಿಸುವ, ಮನರಂಜನೆ ಉದ್ದೇಶಕ್ಕಾಗಿ ಹುಲಿವೇಷ ಇರುವುದಿಲ್ಲ. ನವರಾತ್ರಿಯ ಮೆರವಣಿಗೆಯಲ್ಲಿ ಹುಲಿ ವೇಷಧಾರಿಗಳು ನರ್ತನ ಮಾಡುವುದು ಇಲ್ಲಿನ ಸಂಪ್ರದಾಯ. ಹುಲಿವೇಷ ಇಲ್ಲದ ದಸರಾ, ಜಂಬೂ ಸವಾರಿ ಇಲ್ಲದ ಮೈಸೂರು ದಸರಾದಂತೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಗಿರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹನೀಷ್ ಎನ್. ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.
Mangaladevi Dasara Shobayatrey urges for pilivesha this Navaratri in Mangalore after the government restricted for pilivesha, the tiger dance, during this Navaratri festival.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm