ಬ್ರೇಕಿಂಗ್ ನ್ಯೂಸ್
10-10-20 05:51 pm Mangaluru Correspondent ಕರಾವಳಿ
ಮಂಗಳೂರು, ಅ.10: ನವರಾತ್ರಿ ವೇಳೆ ಹುಲಿವೇಷಗಳ ಅಬ್ಬರ ಕಾಮನ್. ಆದರೆ ಈ ಬಾರಿ ಕೊರೊನಾ ಕಾರಣದಿಂದ ಹುಲಿವೇಷ ಕುಣಿತಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದು ಕರಾವಳಿಯಲ್ಲಿ ಹುಲಿವೇಷ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹುಲಿವೇಷ ಆಡಂಬರಕ್ಕಲ್ಲ. ಅದು ತುಳುನಾಡಿನ ಸಂಸ್ಕೃತಿ. ಹಾಗಾಗಿ ಕೊರೊನಾ ಕಾರಣಕ್ಕೆ ಹುಲಿವೇಷ ನಿಲ್ಲಿಸಬಾರದು. ಸರಳ ರೀತಿಯಲ್ಲಿ ದೇವರ ಸೇವೆಗೆ ಹುಲಿವೇಷ ತಂಡಗಳಿಗೆ ಅವಕಾಶ ನೀಡಬೇಕು ಎಂದು ಮಂಗಳಾದೇವಿ ದಸರಾ ಶೋಭಾಯಾತ್ರೆ ಸಮಿತಿ ಒತ್ತಾಯಿಸಿದೆ.

ಸಮಿತಿಯ ಅಧ್ಯಕ್ಷ ದಿಲ್ರಾಜ್ ಆಳ್ವ ಸುದ್ದಿಗೋಷ್ಟಿಯಲ್ಲಿ ಈ ಒತ್ತಾಯ ಮಾಡಿದ್ದು, ಜಿಲ್ಲಾಡಳಿತ ಕೋವಿಡ್ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತಕ್ಕೆ ನಿಷೇಧ ಹೇರಿದ್ದು ಸರಿಯಲ್ಲ. ಮಂಗಳಾದೇವಿ ಉತ್ಸವದ ಸಮಯದಲ್ಲಿ ಹಿಂದಿನಿಂದಲೂ ರಥೋತ್ಸವಕ್ಕೆ ಹುಲಿವೇಷ ಹಾಕುವ ಸಂಪ್ರದಾಯ ಇದೆ. ಈ ಸಂಪ್ರದಾಯವನ್ನು ನಿಲ್ಲಿಸುವಂತೆ ಆಗಬಾರದು. ಸಾಂಕೇತಿಕವಾಗಿ ದೇವರ ಸೇವೆ ನಡೆಸಲು ಅವಕಾಶ ನೀಡಬೇಕು. ಹುಲಿವೇಷವನ್ನು ವ್ರತ ಹಿಡಿದು ನಡೆಸುವ ಮಂದಿ ಇದ್ದಾರೆ. ಪ್ರತಿ ವರ್ಷವೂ ವೇಷ ಹಾಕುವವರೂ ಇದ್ದಾರೆ. ನವರಾತ್ರಿಗೂ ಹುಲಿವೇಷಕ್ಕೂ ಹತ್ತಿರದ ನಂಟು ಇದ್ದು ಭಾವನಾತ್ಮಕ ವಿಚಾರವಾಗಿದೆ ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷ ದಿನೇಶ್ ಕುಂಪಲ ಮಾತನಾಡಿ, ಈ ಬಾರಿ ಹುಲಿವೇಷ ಕೇವಲ ಹರಕೆ ಮಾತ್ರಕ್ಕೆ ನಡೆಸಲಾಗುವುದು. ಯಾವುದೇ ಆದಾಯ ಗಳಿಸುವ, ಮನರಂಜನೆ ಉದ್ದೇಶಕ್ಕಾಗಿ ಹುಲಿವೇಷ ಇರುವುದಿಲ್ಲ. ನವರಾತ್ರಿಯ ಮೆರವಣಿಗೆಯಲ್ಲಿ ಹುಲಿ ವೇಷಧಾರಿಗಳು ನರ್ತನ ಮಾಡುವುದು ಇಲ್ಲಿನ ಸಂಪ್ರದಾಯ. ಹುಲಿವೇಷ ಇಲ್ಲದ ದಸರಾ, ಜಂಬೂ ಸವಾರಿ ಇಲ್ಲದ ಮೈಸೂರು ದಸರಾದಂತೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಗಿರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹನೀಷ್ ಎನ್. ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.
Mangaladevi Dasara Shobayatrey urges for pilivesha this Navaratri in Mangalore after the government restricted for pilivesha, the tiger dance, during this Navaratri festival.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am