ಬ್ರೇಕಿಂಗ್ ನ್ಯೂಸ್
10-10-20 05:51 pm Mangaluru Correspondent ಕರಾವಳಿ
ಮಂಗಳೂರು, ಅ.10: ನವರಾತ್ರಿ ವೇಳೆ ಹುಲಿವೇಷಗಳ ಅಬ್ಬರ ಕಾಮನ್. ಆದರೆ ಈ ಬಾರಿ ಕೊರೊನಾ ಕಾರಣದಿಂದ ಹುಲಿವೇಷ ಕುಣಿತಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದು ಕರಾವಳಿಯಲ್ಲಿ ಹುಲಿವೇಷ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹುಲಿವೇಷ ಆಡಂಬರಕ್ಕಲ್ಲ. ಅದು ತುಳುನಾಡಿನ ಸಂಸ್ಕೃತಿ. ಹಾಗಾಗಿ ಕೊರೊನಾ ಕಾರಣಕ್ಕೆ ಹುಲಿವೇಷ ನಿಲ್ಲಿಸಬಾರದು. ಸರಳ ರೀತಿಯಲ್ಲಿ ದೇವರ ಸೇವೆಗೆ ಹುಲಿವೇಷ ತಂಡಗಳಿಗೆ ಅವಕಾಶ ನೀಡಬೇಕು ಎಂದು ಮಂಗಳಾದೇವಿ ದಸರಾ ಶೋಭಾಯಾತ್ರೆ ಸಮಿತಿ ಒತ್ತಾಯಿಸಿದೆ.

ಸಮಿತಿಯ ಅಧ್ಯಕ್ಷ ದಿಲ್ರಾಜ್ ಆಳ್ವ ಸುದ್ದಿಗೋಷ್ಟಿಯಲ್ಲಿ ಈ ಒತ್ತಾಯ ಮಾಡಿದ್ದು, ಜಿಲ್ಲಾಡಳಿತ ಕೋವಿಡ್ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತಕ್ಕೆ ನಿಷೇಧ ಹೇರಿದ್ದು ಸರಿಯಲ್ಲ. ಮಂಗಳಾದೇವಿ ಉತ್ಸವದ ಸಮಯದಲ್ಲಿ ಹಿಂದಿನಿಂದಲೂ ರಥೋತ್ಸವಕ್ಕೆ ಹುಲಿವೇಷ ಹಾಕುವ ಸಂಪ್ರದಾಯ ಇದೆ. ಈ ಸಂಪ್ರದಾಯವನ್ನು ನಿಲ್ಲಿಸುವಂತೆ ಆಗಬಾರದು. ಸಾಂಕೇತಿಕವಾಗಿ ದೇವರ ಸೇವೆ ನಡೆಸಲು ಅವಕಾಶ ನೀಡಬೇಕು. ಹುಲಿವೇಷವನ್ನು ವ್ರತ ಹಿಡಿದು ನಡೆಸುವ ಮಂದಿ ಇದ್ದಾರೆ. ಪ್ರತಿ ವರ್ಷವೂ ವೇಷ ಹಾಕುವವರೂ ಇದ್ದಾರೆ. ನವರಾತ್ರಿಗೂ ಹುಲಿವೇಷಕ್ಕೂ ಹತ್ತಿರದ ನಂಟು ಇದ್ದು ಭಾವನಾತ್ಮಕ ವಿಚಾರವಾಗಿದೆ ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷ ದಿನೇಶ್ ಕುಂಪಲ ಮಾತನಾಡಿ, ಈ ಬಾರಿ ಹುಲಿವೇಷ ಕೇವಲ ಹರಕೆ ಮಾತ್ರಕ್ಕೆ ನಡೆಸಲಾಗುವುದು. ಯಾವುದೇ ಆದಾಯ ಗಳಿಸುವ, ಮನರಂಜನೆ ಉದ್ದೇಶಕ್ಕಾಗಿ ಹುಲಿವೇಷ ಇರುವುದಿಲ್ಲ. ನವರಾತ್ರಿಯ ಮೆರವಣಿಗೆಯಲ್ಲಿ ಹುಲಿ ವೇಷಧಾರಿಗಳು ನರ್ತನ ಮಾಡುವುದು ಇಲ್ಲಿನ ಸಂಪ್ರದಾಯ. ಹುಲಿವೇಷ ಇಲ್ಲದ ದಸರಾ, ಜಂಬೂ ಸವಾರಿ ಇಲ್ಲದ ಮೈಸೂರು ದಸರಾದಂತೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಗಿರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹನೀಷ್ ಎನ್. ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.
Mangaladevi Dasara Shobayatrey urges for pilivesha this Navaratri in Mangalore after the government restricted for pilivesha, the tiger dance, during this Navaratri festival.
30-01-26 05:00 pm
Bangalore Correspondent
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm