ಬ್ರೇಕಿಂಗ್ ನ್ಯೂಸ್
12-10-22 08:15 pm Mangalore Correspondent ಕರಾವಳಿ
ಉಳ್ಳಾಲ, ಅ.12 : ಕುತ್ತಾರಿನಲ್ಲಿ ಬೈಕಲ್ಲಿ ತೆರಳುತ್ತಿದ್ದ ಗೃಹ ರಕ್ಷಕ ಸಿಬ್ಬಂದಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದ್ದು ಮಗಳ ಮದುವೆ ತಯಾರಿಯಲ್ಲಿದ್ದ ಬಡಪಾಯಿ ಗೃಹ ರಕ್ಷಕ ಸಿಬ್ಬಂದಿ ಕಾಲು ಮುರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ್ದಾರೆ.
ಗೃಹ ರಕ್ಷಕ ದಳ ಸಿಬ್ಬಂದಿ ಹಮೀದ್ ಪಾವುಳ(52) ಅವರು ಅಪಘಾತದಿಂದ ಕಾಲು ಮುರಿತಕ್ಕೊಳಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಮಧ್ಯಾಹ್ನ ತನ್ನ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕುತ್ತಾರಿನಲ್ಲಿ ಅಪರಿಚಿತ ಬೈಕೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ರಸ್ತೆಗೆಸೆಯಲ್ಪಟ್ಟ ಹಮೀದ್ ಅವರ ಎಡಗಾಲು ಮುರಿದಿದೆ.

ಹಮೀದ್ ಅವರು ಗೃಹರಕ್ಷಕ ಸಿಬ್ಬಂದಿಯಾಗಿದ್ದು ಕಳೆದ ಅನೇಕ ವರುಷಗಳಿಂದ ಟ್ರಾಫಿಕ್ ವಾರ್ಡನ್ ಆಗಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೇಸು ಹಾಕುತ್ತಿದ್ದ ಟ್ರಾಫಿಕ್ ಪೊಲೀಸನಿಗೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಆರೋಪಿಯನ್ನ ಹಮೀದ್ ಅವರೇ ಬೆನ್ನಟ್ಟಿ ಹಿಡಿದಿದ್ದರು. ಹಮೀದ್ ಅವರ ಕಾರ್ಯವನ್ನ ಶ್ಲಾಘಿಸಿ ಅಂದಿನ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರು ಸನ್ಮಾನಿಸಿ ಬಹುಮಾನ ನೀಡಿದ್ದರು.ಬಡಪಾಯಿ ಹಮೀದ್ ಅವರ ಹಿರಿಯ ಮಗಳಿಗೆ ಇದೇ ಅಕ್ಟೋಬರ್ 30 ರಂದು ಮದುವೆ ನಿಶ್ಚಯವಾಗಿತ್ತು. ಹಮೀದ್ ಅವರು ಈ ಮೊದಲು ಅಪಘಾತಕ್ಕೀಡಾಗಿ ಬಲಗಾಲಿನ ಬೆರಳುಗಳನ್ನ ಕಳಕೊಂಡಿದ್ದರು. ಬಡತನದಲ್ಲಿರುವ ಹಮೀದ್ ಅವರು ಉಳ್ಳವರ ಸಹಕಾರದಲ್ಲಿ ಮಗಳ ಮದುವೆಗೆ ತಯಾರಿ ನಡೆಸುತ್ತಿದ್ದರು.

ಕಳೆದ ಕೆಲ ದಿನಗಳ ಹಿಂದಷ್ಟೆ ಉಳ್ಳಾಲ ಬೈಲಿನಲ್ಲಿ ಗಸ್ತಿನಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹೆಡ್ ಕಾನ್ಸ್ಟೇಬಲ್ ಲೋಕೇಶ್ ನಾಯಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆ ನಡೆದಿತ್ತು. ಗಾಯಾಳು ಲೋಕೇಶ್ ಇನ್ನೂ ಚೇತರಿಸಿಲ್ಲ.
Kuttar accident hit and run, traffic home guard leg broken, hospitalized in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm