ಬ್ರೇಕಿಂಗ್ ನ್ಯೂಸ್
12-10-22 08:15 pm Mangalore Correspondent ಕರಾವಳಿ
ಉಳ್ಳಾಲ, ಅ.12 : ಕುತ್ತಾರಿನಲ್ಲಿ ಬೈಕಲ್ಲಿ ತೆರಳುತ್ತಿದ್ದ ಗೃಹ ರಕ್ಷಕ ಸಿಬ್ಬಂದಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದ್ದು ಮಗಳ ಮದುವೆ ತಯಾರಿಯಲ್ಲಿದ್ದ ಬಡಪಾಯಿ ಗೃಹ ರಕ್ಷಕ ಸಿಬ್ಬಂದಿ ಕಾಲು ಮುರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ್ದಾರೆ.
ಗೃಹ ರಕ್ಷಕ ದಳ ಸಿಬ್ಬಂದಿ ಹಮೀದ್ ಪಾವುಳ(52) ಅವರು ಅಪಘಾತದಿಂದ ಕಾಲು ಮುರಿತಕ್ಕೊಳಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಮಧ್ಯಾಹ್ನ ತನ್ನ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕುತ್ತಾರಿನಲ್ಲಿ ಅಪರಿಚಿತ ಬೈಕೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ರಸ್ತೆಗೆಸೆಯಲ್ಪಟ್ಟ ಹಮೀದ್ ಅವರ ಎಡಗಾಲು ಮುರಿದಿದೆ.

ಹಮೀದ್ ಅವರು ಗೃಹರಕ್ಷಕ ಸಿಬ್ಬಂದಿಯಾಗಿದ್ದು ಕಳೆದ ಅನೇಕ ವರುಷಗಳಿಂದ ಟ್ರಾಫಿಕ್ ವಾರ್ಡನ್ ಆಗಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೇಸು ಹಾಕುತ್ತಿದ್ದ ಟ್ರಾಫಿಕ್ ಪೊಲೀಸನಿಗೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಆರೋಪಿಯನ್ನ ಹಮೀದ್ ಅವರೇ ಬೆನ್ನಟ್ಟಿ ಹಿಡಿದಿದ್ದರು. ಹಮೀದ್ ಅವರ ಕಾರ್ಯವನ್ನ ಶ್ಲಾಘಿಸಿ ಅಂದಿನ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರು ಸನ್ಮಾನಿಸಿ ಬಹುಮಾನ ನೀಡಿದ್ದರು.ಬಡಪಾಯಿ ಹಮೀದ್ ಅವರ ಹಿರಿಯ ಮಗಳಿಗೆ ಇದೇ ಅಕ್ಟೋಬರ್ 30 ರಂದು ಮದುವೆ ನಿಶ್ಚಯವಾಗಿತ್ತು. ಹಮೀದ್ ಅವರು ಈ ಮೊದಲು ಅಪಘಾತಕ್ಕೀಡಾಗಿ ಬಲಗಾಲಿನ ಬೆರಳುಗಳನ್ನ ಕಳಕೊಂಡಿದ್ದರು. ಬಡತನದಲ್ಲಿರುವ ಹಮೀದ್ ಅವರು ಉಳ್ಳವರ ಸಹಕಾರದಲ್ಲಿ ಮಗಳ ಮದುವೆಗೆ ತಯಾರಿ ನಡೆಸುತ್ತಿದ್ದರು.

ಕಳೆದ ಕೆಲ ದಿನಗಳ ಹಿಂದಷ್ಟೆ ಉಳ್ಳಾಲ ಬೈಲಿನಲ್ಲಿ ಗಸ್ತಿನಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹೆಡ್ ಕಾನ್ಸ್ಟೇಬಲ್ ಲೋಕೇಶ್ ನಾಯಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆ ನಡೆದಿತ್ತು. ಗಾಯಾಳು ಲೋಕೇಶ್ ಇನ್ನೂ ಚೇತರಿಸಿಲ್ಲ.
Kuttar accident hit and run, traffic home guard leg broken, hospitalized in Mangalore.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm