ಬ್ರೇಕಿಂಗ್ ನ್ಯೂಸ್
14-10-22 01:55 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ಹರೀಶ್ ಪೂಂಜ ಬೆಂಗಳೂರಿನಿಂದ ವಿಮಾನದ ಮೂಲಕ ಗುರುವಾರ ಸಂಜೆ ಮಂಗಳೂರಿಗೆ ಮರಳಿದ್ದು ಸರ್ಕಿಟ್ ಹೌಸ್ ನಲ್ಲಿ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ರಾತ್ರಿ 11 ಗಂಟೆ ವೇಳೆಗೆ ಮಂಗಳೂರಿನಿಂದ ಖಾಸಗಿ ಕಾರಿನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಇನ್ನೊಂದು ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಶಾಸಕರನ್ನು ಉದ್ದೇಶಿಸಿ ಅವಾಚ್ಯ ಪದಗಳಿಂದ ನಿಂದಿಸಿ, ತಲವಾರು ತೋರಿಸಿ ಬೆದರಿಸಿದ್ದಾನೆ.
ಶಾಸಕ ಹರೀಶ್ ಪೂಂಜ ಅವರ ಅಧಿಕೃತ ಕಾರು ಹಿಂದಿನಿಂದ ತೆರಳುತ್ತಿತ್ತು. ಹರೀಶ್ ಪೂಂಜ ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ, ಪಡೀಲ್ ಬಳಿಯ ಅಡ್ಯಾರ್ ಫ್ಲೈ ಓವರ್ ಬಳಿ ನಿಲ್ಲಿಸಿದ್ದ ಸ್ಕಾರ್ಪಿಯೋ ಕಾರು ಹಿಂಬಾಲಿಸಿದ್ದು ಫರಂಗಿಪೇಟೆಯಲ್ಲಿ ಅಡ್ಡಗಟ್ಟಿ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಶಾಸಕರಿದ್ದ ಕಾರನ್ನು ಫರಂಗಿಪೇಟೆಯಲ್ಲಿ ಪೊಲೀಸ್ ಔಟ್ ಪೋಸ್ಟ್ ಇರುವಲ್ಲಿ ಸೈಡಿಗೆ ಹಾಕುತ್ತಿದ್ದಂತೆ ಅವ್ಯಾಚ್ಯವಾಗಿ ಬೈದು ಬಿಸಿ ರೋಡ್ ಕಡೆಗೆ ಪರಾರಿಯಾಗಿದೆ. ಶಾಸಕರಿದ್ದ ಕಾರಿನಲ್ಲಿ ಪ್ರಶಾಂತ್ ಮತ್ತು ಕುಶಿತ್ ಎಂಬಿಬ್ಬರಿದ್ದರು. ಕುಶಿತ್ ಕಾರು ಚಲಾಯಿಸುತ್ತಿದ್ದು ಅವರನ್ನುದ್ದೇಶಿಸಿ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ.
Miscreants reportedly waylaid the car of Belthangady MLA Harish Poonja flashed swords. The incident was reported in the outskirts of the city at Farangipete on Thursday October 13.The incident took place while the MLA was returning from Bengaluru to Belthangady.The miscreants had followed the car from Padil to Farangipete.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm