ಬ್ರೇಕಿಂಗ್ ನ್ಯೂಸ್
14-10-22 01:55 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ಹರೀಶ್ ಪೂಂಜ ಬೆಂಗಳೂರಿನಿಂದ ವಿಮಾನದ ಮೂಲಕ ಗುರುವಾರ ಸಂಜೆ ಮಂಗಳೂರಿಗೆ ಮರಳಿದ್ದು ಸರ್ಕಿಟ್ ಹೌಸ್ ನಲ್ಲಿ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ರಾತ್ರಿ 11 ಗಂಟೆ ವೇಳೆಗೆ ಮಂಗಳೂರಿನಿಂದ ಖಾಸಗಿ ಕಾರಿನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಇನ್ನೊಂದು ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಶಾಸಕರನ್ನು ಉದ್ದೇಶಿಸಿ ಅವಾಚ್ಯ ಪದಗಳಿಂದ ನಿಂದಿಸಿ, ತಲವಾರು ತೋರಿಸಿ ಬೆದರಿಸಿದ್ದಾನೆ.
ಶಾಸಕ ಹರೀಶ್ ಪೂಂಜ ಅವರ ಅಧಿಕೃತ ಕಾರು ಹಿಂದಿನಿಂದ ತೆರಳುತ್ತಿತ್ತು. ಹರೀಶ್ ಪೂಂಜ ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ, ಪಡೀಲ್ ಬಳಿಯ ಅಡ್ಯಾರ್ ಫ್ಲೈ ಓವರ್ ಬಳಿ ನಿಲ್ಲಿಸಿದ್ದ ಸ್ಕಾರ್ಪಿಯೋ ಕಾರು ಹಿಂಬಾಲಿಸಿದ್ದು ಫರಂಗಿಪೇಟೆಯಲ್ಲಿ ಅಡ್ಡಗಟ್ಟಿ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಶಾಸಕರಿದ್ದ ಕಾರನ್ನು ಫರಂಗಿಪೇಟೆಯಲ್ಲಿ ಪೊಲೀಸ್ ಔಟ್ ಪೋಸ್ಟ್ ಇರುವಲ್ಲಿ ಸೈಡಿಗೆ ಹಾಕುತ್ತಿದ್ದಂತೆ ಅವ್ಯಾಚ್ಯವಾಗಿ ಬೈದು ಬಿಸಿ ರೋಡ್ ಕಡೆಗೆ ಪರಾರಿಯಾಗಿದೆ. ಶಾಸಕರಿದ್ದ ಕಾರಿನಲ್ಲಿ ಪ್ರಶಾಂತ್ ಮತ್ತು ಕುಶಿತ್ ಎಂಬಿಬ್ಬರಿದ್ದರು. ಕುಶಿತ್ ಕಾರು ಚಲಾಯಿಸುತ್ತಿದ್ದು ಅವರನ್ನುದ್ದೇಶಿಸಿ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ.
Miscreants reportedly waylaid the car of Belthangady MLA Harish Poonja flashed swords. The incident was reported in the outskirts of the city at Farangipete on Thursday October 13.The incident took place while the MLA was returning from Bengaluru to Belthangady.The miscreants had followed the car from Padil to Farangipete.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am