ಬ್ರೇಕಿಂಗ್ ನ್ಯೂಸ್
14-10-22 04:56 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬ್ಯಾಂಕ್ ಉದ್ಯೋಗಿಯೋರ್ವರು ಮನೆಯಲ್ಲಿ ಪತ್ನಿ, ಮಕ್ಕಳಿಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಚ್ಚಿಲ ಕೋಡಿ ಎಂಬಲ್ಲಿ ನಡೆದಿದೆ.
ಕೊಣಾಜೆ, ಮುಚ್ಚಿಲ ಕೋಡಿ ನಿವಾಸಿ ಚರಣ್ ರಾಜ್ ಶೆಟ್ಟಿ(37) ಆತ್ಮಹತ್ಯೆಗೈದ ಯುವಕ. ಚರಣ್ ಅವರು ಕರ್ನಾಟಕ ಬ್ಯಾಂಕ್ ನ ಪಚ್ಚನಾಡಿ ಶಾಖೆಯಲ್ಲಿ ಅಟೆಂಡರ್ ಆಗಿದ್ದರು. ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಅವರು ಮದ್ಯ ವ್ಯಸನಕ್ಕೆ ದಾಸರಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಪತ್ನಿ ಮತ್ತು ಇಬ್ಬರು ಮಕ್ಕಳು ನವರಾತ್ರಿಗೆಂದು ತವರು ಮನೆಗೆ ತೆರಳಿದ್ದರು. ನಿನ್ನೆ ಚರಣ್ ಅವರು ಪತ್ನಿಯ ಮನೆಗೆ ತೆರಳಿ ಮಕ್ಕಳನ್ನು ಮಾತನಾಡಿಸಿ ಬಂದಿದ್ದರಂತೆ.
ಚರಣ್ ಅವರ ತಾಯಿ ಶಾಲಾ ಬಸ್ಸಲ್ಲಿ ಕಂಡಕ್ಟರ್ ಆಗಿದ್ದು ಇಂದು ಬೆಳಗ್ಗೆ ಬೇಗನೆ ಕೆಲಸಕ್ಕೆ ತೆರಳಿದ್ದಾರೆ. ಬಳಿಕ ಚರಣ್ ಅವರು ಸಾಕು ನಾಯಿಯನ್ನ ಹಿಡಿದು ವಾಕಿಂಗ್ ತೆರಳಿದ್ದರಂತೆ. ಮಧ್ಯಾಹ್ನ ಚರಣ್ ಅವರ ಮೊಬೈಲಿಗೆ ಪತ್ನಿ ಕರೆ ಮಾಡಿದ್ದು ಸ್ವೀಕರಿಸದೇ ಇದ್ದಾಗ ಮುಚ್ಚಿಲ ಕೋಡಿಯ ನೆರೆಹೊರೆಯವರಲ್ಲಿ ವಿಚಾರಿಸಿದ್ದಾರೆ. ನೆರೆ ಹೊರೆಯವರು ಮನೆಯನ್ನ ಪರಿಶೀಲಿಸಿದಾಗ ಚರಣ್ ರಾಜ್ ನೇಣು ಬಿಗಿದಿದ್ದು ಅವರನ್ನ ರಕ್ಷಿಸಲು ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅಸುನೀಗಿದ್ದಾರೆ.
ಮೃತ ಚರಣ್ ರಾಜ್ ಅವರಿಗೆ ಆರು ತಿಂಗಳ ಮತ್ತು ಮೂರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
Ullal 37 year old Bank employee commits suicide in Mangalore , financial crises suspected. The deceased has been identified as Charan Raj Shetty (37).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm