ಬ್ರೇಕಿಂಗ್ ನ್ಯೂಸ್
14-10-22 04:56 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬ್ಯಾಂಕ್ ಉದ್ಯೋಗಿಯೋರ್ವರು ಮನೆಯಲ್ಲಿ ಪತ್ನಿ, ಮಕ್ಕಳಿಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಚ್ಚಿಲ ಕೋಡಿ ಎಂಬಲ್ಲಿ ನಡೆದಿದೆ.
ಕೊಣಾಜೆ, ಮುಚ್ಚಿಲ ಕೋಡಿ ನಿವಾಸಿ ಚರಣ್ ರಾಜ್ ಶೆಟ್ಟಿ(37) ಆತ್ಮಹತ್ಯೆಗೈದ ಯುವಕ. ಚರಣ್ ಅವರು ಕರ್ನಾಟಕ ಬ್ಯಾಂಕ್ ನ ಪಚ್ಚನಾಡಿ ಶಾಖೆಯಲ್ಲಿ ಅಟೆಂಡರ್ ಆಗಿದ್ದರು. ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಅವರು ಮದ್ಯ ವ್ಯಸನಕ್ಕೆ ದಾಸರಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಪತ್ನಿ ಮತ್ತು ಇಬ್ಬರು ಮಕ್ಕಳು ನವರಾತ್ರಿಗೆಂದು ತವರು ಮನೆಗೆ ತೆರಳಿದ್ದರು. ನಿನ್ನೆ ಚರಣ್ ಅವರು ಪತ್ನಿಯ ಮನೆಗೆ ತೆರಳಿ ಮಕ್ಕಳನ್ನು ಮಾತನಾಡಿಸಿ ಬಂದಿದ್ದರಂತೆ.
ಚರಣ್ ಅವರ ತಾಯಿ ಶಾಲಾ ಬಸ್ಸಲ್ಲಿ ಕಂಡಕ್ಟರ್ ಆಗಿದ್ದು ಇಂದು ಬೆಳಗ್ಗೆ ಬೇಗನೆ ಕೆಲಸಕ್ಕೆ ತೆರಳಿದ್ದಾರೆ. ಬಳಿಕ ಚರಣ್ ಅವರು ಸಾಕು ನಾಯಿಯನ್ನ ಹಿಡಿದು ವಾಕಿಂಗ್ ತೆರಳಿದ್ದರಂತೆ. ಮಧ್ಯಾಹ್ನ ಚರಣ್ ಅವರ ಮೊಬೈಲಿಗೆ ಪತ್ನಿ ಕರೆ ಮಾಡಿದ್ದು ಸ್ವೀಕರಿಸದೇ ಇದ್ದಾಗ ಮುಚ್ಚಿಲ ಕೋಡಿಯ ನೆರೆಹೊರೆಯವರಲ್ಲಿ ವಿಚಾರಿಸಿದ್ದಾರೆ. ನೆರೆ ಹೊರೆಯವರು ಮನೆಯನ್ನ ಪರಿಶೀಲಿಸಿದಾಗ ಚರಣ್ ರಾಜ್ ನೇಣು ಬಿಗಿದಿದ್ದು ಅವರನ್ನ ರಕ್ಷಿಸಲು ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅಸುನೀಗಿದ್ದಾರೆ.
ಮೃತ ಚರಣ್ ರಾಜ್ ಅವರಿಗೆ ಆರು ತಿಂಗಳ ಮತ್ತು ಮೂರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
Ullal 37 year old Bank employee commits suicide in Mangalore , financial crises suspected. The deceased has been identified as Charan Raj Shetty (37).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm