ಬ್ರೇಕಿಂಗ್ ನ್ಯೂಸ್
14-10-22 04:56 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬ್ಯಾಂಕ್ ಉದ್ಯೋಗಿಯೋರ್ವರು ಮನೆಯಲ್ಲಿ ಪತ್ನಿ, ಮಕ್ಕಳಿಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಚ್ಚಿಲ ಕೋಡಿ ಎಂಬಲ್ಲಿ ನಡೆದಿದೆ.
ಕೊಣಾಜೆ, ಮುಚ್ಚಿಲ ಕೋಡಿ ನಿವಾಸಿ ಚರಣ್ ರಾಜ್ ಶೆಟ್ಟಿ(37) ಆತ್ಮಹತ್ಯೆಗೈದ ಯುವಕ. ಚರಣ್ ಅವರು ಕರ್ನಾಟಕ ಬ್ಯಾಂಕ್ ನ ಪಚ್ಚನಾಡಿ ಶಾಖೆಯಲ್ಲಿ ಅಟೆಂಡರ್ ಆಗಿದ್ದರು. ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಅವರು ಮದ್ಯ ವ್ಯಸನಕ್ಕೆ ದಾಸರಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಪತ್ನಿ ಮತ್ತು ಇಬ್ಬರು ಮಕ್ಕಳು ನವರಾತ್ರಿಗೆಂದು ತವರು ಮನೆಗೆ ತೆರಳಿದ್ದರು. ನಿನ್ನೆ ಚರಣ್ ಅವರು ಪತ್ನಿಯ ಮನೆಗೆ ತೆರಳಿ ಮಕ್ಕಳನ್ನು ಮಾತನಾಡಿಸಿ ಬಂದಿದ್ದರಂತೆ.
ಚರಣ್ ಅವರ ತಾಯಿ ಶಾಲಾ ಬಸ್ಸಲ್ಲಿ ಕಂಡಕ್ಟರ್ ಆಗಿದ್ದು ಇಂದು ಬೆಳಗ್ಗೆ ಬೇಗನೆ ಕೆಲಸಕ್ಕೆ ತೆರಳಿದ್ದಾರೆ. ಬಳಿಕ ಚರಣ್ ಅವರು ಸಾಕು ನಾಯಿಯನ್ನ ಹಿಡಿದು ವಾಕಿಂಗ್ ತೆರಳಿದ್ದರಂತೆ. ಮಧ್ಯಾಹ್ನ ಚರಣ್ ಅವರ ಮೊಬೈಲಿಗೆ ಪತ್ನಿ ಕರೆ ಮಾಡಿದ್ದು ಸ್ವೀಕರಿಸದೇ ಇದ್ದಾಗ ಮುಚ್ಚಿಲ ಕೋಡಿಯ ನೆರೆಹೊರೆಯವರಲ್ಲಿ ವಿಚಾರಿಸಿದ್ದಾರೆ. ನೆರೆ ಹೊರೆಯವರು ಮನೆಯನ್ನ ಪರಿಶೀಲಿಸಿದಾಗ ಚರಣ್ ರಾಜ್ ನೇಣು ಬಿಗಿದಿದ್ದು ಅವರನ್ನ ರಕ್ಷಿಸಲು ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅಸುನೀಗಿದ್ದಾರೆ.
ಮೃತ ಚರಣ್ ರಾಜ್ ಅವರಿಗೆ ಆರು ತಿಂಗಳ ಮತ್ತು ಮೂರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
Ullal 37 year old Bank employee commits suicide in Mangalore , financial crises suspected. The deceased has been identified as Charan Raj Shetty (37).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm