ಬ್ರೇಕಿಂಗ್ ನ್ಯೂಸ್
14-10-22 04:56 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬ್ಯಾಂಕ್ ಉದ್ಯೋಗಿಯೋರ್ವರು ಮನೆಯಲ್ಲಿ ಪತ್ನಿ, ಮಕ್ಕಳಿಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಚ್ಚಿಲ ಕೋಡಿ ಎಂಬಲ್ಲಿ ನಡೆದಿದೆ.
ಕೊಣಾಜೆ, ಮುಚ್ಚಿಲ ಕೋಡಿ ನಿವಾಸಿ ಚರಣ್ ರಾಜ್ ಶೆಟ್ಟಿ(37) ಆತ್ಮಹತ್ಯೆಗೈದ ಯುವಕ. ಚರಣ್ ಅವರು ಕರ್ನಾಟಕ ಬ್ಯಾಂಕ್ ನ ಪಚ್ಚನಾಡಿ ಶಾಖೆಯಲ್ಲಿ ಅಟೆಂಡರ್ ಆಗಿದ್ದರು. ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಅವರು ಮದ್ಯ ವ್ಯಸನಕ್ಕೆ ದಾಸರಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಪತ್ನಿ ಮತ್ತು ಇಬ್ಬರು ಮಕ್ಕಳು ನವರಾತ್ರಿಗೆಂದು ತವರು ಮನೆಗೆ ತೆರಳಿದ್ದರು. ನಿನ್ನೆ ಚರಣ್ ಅವರು ಪತ್ನಿಯ ಮನೆಗೆ ತೆರಳಿ ಮಕ್ಕಳನ್ನು ಮಾತನಾಡಿಸಿ ಬಂದಿದ್ದರಂತೆ.
ಚರಣ್ ಅವರ ತಾಯಿ ಶಾಲಾ ಬಸ್ಸಲ್ಲಿ ಕಂಡಕ್ಟರ್ ಆಗಿದ್ದು ಇಂದು ಬೆಳಗ್ಗೆ ಬೇಗನೆ ಕೆಲಸಕ್ಕೆ ತೆರಳಿದ್ದಾರೆ. ಬಳಿಕ ಚರಣ್ ಅವರು ಸಾಕು ನಾಯಿಯನ್ನ ಹಿಡಿದು ವಾಕಿಂಗ್ ತೆರಳಿದ್ದರಂತೆ. ಮಧ್ಯಾಹ್ನ ಚರಣ್ ಅವರ ಮೊಬೈಲಿಗೆ ಪತ್ನಿ ಕರೆ ಮಾಡಿದ್ದು ಸ್ವೀಕರಿಸದೇ ಇದ್ದಾಗ ಮುಚ್ಚಿಲ ಕೋಡಿಯ ನೆರೆಹೊರೆಯವರಲ್ಲಿ ವಿಚಾರಿಸಿದ್ದಾರೆ. ನೆರೆ ಹೊರೆಯವರು ಮನೆಯನ್ನ ಪರಿಶೀಲಿಸಿದಾಗ ಚರಣ್ ರಾಜ್ ನೇಣು ಬಿಗಿದಿದ್ದು ಅವರನ್ನ ರಕ್ಷಿಸಲು ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅಸುನೀಗಿದ್ದಾರೆ.
ಮೃತ ಚರಣ್ ರಾಜ್ ಅವರಿಗೆ ಆರು ತಿಂಗಳ ಮತ್ತು ಮೂರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
Ullal 37 year old Bank employee commits suicide in Mangalore , financial crises suspected. The deceased has been identified as Charan Raj Shetty (37).
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm