ಬ್ರೇಕಿಂಗ್ ನ್ಯೂಸ್
14-10-22 10:38 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿದ ಘಟನೆ ಕೊಲೆ ಯತ್ನ ಅಥವಾ ದಾಳಿ ನಡೆಸಿದ್ದಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂದು ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆಯಲ್ಲಿ ಸ್ಕಾರ್ಪಿಯೋ ಕಾರು ಮತ್ತು ಅದರ ಚಾಲಕನಾಗಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ಈ ಬಗ್ಗೆ ಮಾಹಿತಿ ನೀಡಿದ್ದ ಎಸ್ಪಿ ಸೋನವಾಣೆ, ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಅಲ್ಲದೆ, ಆತನ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ಆರೋಪಿ ತನ್ನ ಕಾರಿನ ಮೇಲೆ ತಲವಾರು ಝಳಪಿಸಿದ್ದ ಎಂದು ಹರೀಶ್ ಪೂಂಜಾ ದೂರಿದ್ದರು. ಅಲ್ಲದೆ, ಶಾಸಕರ ಕಾರು ಚಾಲಕ ನವೀನ್ ನೀಡಿದ್ದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವರು ಶಾಸಕ ಪೂಂಜಾಗೆ ಗನ್ ಮ್ಯಾನ್ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು.
ಇದೀಗ ಘಟನೆ ಬಗ್ಗೆ ದ.ಕ. ಎಸ್ಪಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಸರ್ಕಾರದಿಂದ ಕಳುಹಿಸಿದ್ದ ಗನ್ ಮ್ಯಾನ್ ಅನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ. ಗೃಹ ಸಚಿವರ ಸೂಚನೆಯಂತೆ ಗನ್ ಮ್ಯಾನ್ ನೀಡಲಾಗಿತ್ತು. ಇದು ಕೊಲೆಯತ್ನ ಅಲ್ಲ, ಕೇವಲ ರೋಡ್ ರೇಜ್ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದರಿಂದ ಮುಜುಗರಗೊಂಡ ಹರೀಶ್ ಪೂಂಜಾ ಸರ್ಕಾರದಿಂದ ಒದಗಿಸಿದ್ದ ಗನ್ ಮ್ಯಾನನ್ನು ವಾಪಸ್ ಕಳುಹಿಸಿದ್ದಾರೆ.
MLA chased by Suspicious Scorpio car was just a road rage, no weapons were found clarifies SP of Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm