ಬ್ರೇಕಿಂಗ್ ನ್ಯೂಸ್
14-10-22 10:38 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿದ ಘಟನೆ ಕೊಲೆ ಯತ್ನ ಅಥವಾ ದಾಳಿ ನಡೆಸಿದ್ದಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂದು ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆಯಲ್ಲಿ ಸ್ಕಾರ್ಪಿಯೋ ಕಾರು ಮತ್ತು ಅದರ ಚಾಲಕನಾಗಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ಈ ಬಗ್ಗೆ ಮಾಹಿತಿ ನೀಡಿದ್ದ ಎಸ್ಪಿ ಸೋನವಾಣೆ, ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಅಲ್ಲದೆ, ಆತನ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ಆರೋಪಿ ತನ್ನ ಕಾರಿನ ಮೇಲೆ ತಲವಾರು ಝಳಪಿಸಿದ್ದ ಎಂದು ಹರೀಶ್ ಪೂಂಜಾ ದೂರಿದ್ದರು. ಅಲ್ಲದೆ, ಶಾಸಕರ ಕಾರು ಚಾಲಕ ನವೀನ್ ನೀಡಿದ್ದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವರು ಶಾಸಕ ಪೂಂಜಾಗೆ ಗನ್ ಮ್ಯಾನ್ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು.
ಇದೀಗ ಘಟನೆ ಬಗ್ಗೆ ದ.ಕ. ಎಸ್ಪಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಸರ್ಕಾರದಿಂದ ಕಳುಹಿಸಿದ್ದ ಗನ್ ಮ್ಯಾನ್ ಅನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ. ಗೃಹ ಸಚಿವರ ಸೂಚನೆಯಂತೆ ಗನ್ ಮ್ಯಾನ್ ನೀಡಲಾಗಿತ್ತು. ಇದು ಕೊಲೆಯತ್ನ ಅಲ್ಲ, ಕೇವಲ ರೋಡ್ ರೇಜ್ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದರಿಂದ ಮುಜುಗರಗೊಂಡ ಹರೀಶ್ ಪೂಂಜಾ ಸರ್ಕಾರದಿಂದ ಒದಗಿಸಿದ್ದ ಗನ್ ಮ್ಯಾನನ್ನು ವಾಪಸ್ ಕಳುಹಿಸಿದ್ದಾರೆ.
MLA chased by Suspicious Scorpio car was just a road rage, no weapons were found clarifies SP of Mangalore.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm