ಬ್ರೇಕಿಂಗ್ ನ್ಯೂಸ್
14-10-22 10:38 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿದ ಘಟನೆ ಕೊಲೆ ಯತ್ನ ಅಥವಾ ದಾಳಿ ನಡೆಸಿದ್ದಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂದು ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆಯಲ್ಲಿ ಸ್ಕಾರ್ಪಿಯೋ ಕಾರು ಮತ್ತು ಅದರ ಚಾಲಕನಾಗಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ಈ ಬಗ್ಗೆ ಮಾಹಿತಿ ನೀಡಿದ್ದ ಎಸ್ಪಿ ಸೋನವಾಣೆ, ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಅಲ್ಲದೆ, ಆತನ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ಆರೋಪಿ ತನ್ನ ಕಾರಿನ ಮೇಲೆ ತಲವಾರು ಝಳಪಿಸಿದ್ದ ಎಂದು ಹರೀಶ್ ಪೂಂಜಾ ದೂರಿದ್ದರು. ಅಲ್ಲದೆ, ಶಾಸಕರ ಕಾರು ಚಾಲಕ ನವೀನ್ ನೀಡಿದ್ದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವರು ಶಾಸಕ ಪೂಂಜಾಗೆ ಗನ್ ಮ್ಯಾನ್ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು.
ಇದೀಗ ಘಟನೆ ಬಗ್ಗೆ ದ.ಕ. ಎಸ್ಪಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಸರ್ಕಾರದಿಂದ ಕಳುಹಿಸಿದ್ದ ಗನ್ ಮ್ಯಾನ್ ಅನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ. ಗೃಹ ಸಚಿವರ ಸೂಚನೆಯಂತೆ ಗನ್ ಮ್ಯಾನ್ ನೀಡಲಾಗಿತ್ತು. ಇದು ಕೊಲೆಯತ್ನ ಅಲ್ಲ, ಕೇವಲ ರೋಡ್ ರೇಜ್ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದರಿಂದ ಮುಜುಗರಗೊಂಡ ಹರೀಶ್ ಪೂಂಜಾ ಸರ್ಕಾರದಿಂದ ಒದಗಿಸಿದ್ದ ಗನ್ ಮ್ಯಾನನ್ನು ವಾಪಸ್ ಕಳುಹಿಸಿದ್ದಾರೆ.
MLA chased by Suspicious Scorpio car was just a road rage, no weapons were found clarifies SP of Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm