ಬ್ರೇಕಿಂಗ್ ನ್ಯೂಸ್
15-10-22 09:52 pm Mangalore Correspondent ಕರಾವಳಿ
ಉಳ್ಳಾಲ, ಅ.15 : ಮುನ್ನೂರು ಗ್ರಾಮ ಪಂಚಾಯತ್ ಆಡಳಿತದಲ್ಲಿ ಅವ್ಯವಹಾರಗಳೇ ತುಂಬಿದ್ದು, ಭಂಡಾರಬೈಲು ಸಮೀಪ ಅಕ್ರಮವಾಗಿ ಮರ ಕಡಿದು ಮಾರಾಟ ಮಾಡಿದ್ದಲ್ಲದೆ ರೈತರ ಕುಮ್ಕಿ ಜಾಗದ ಕುರಿತಾಗಿ ಸರಿಯಾದ ಕಾನೂನು ಜಾರಿ ಬರೋದಕ್ಕೂ ಮುನ್ನವೇ ರೈತರೊಬ್ಬರ ಕುಮ್ಕಿ ಜಾಗವನ್ನು ಸರಕಾರಿ ಜಾಗ ಎಂದು ಅತಿಕ್ರಮಣ ಮಾಡಿದ್ದು ಅಪರಾಧಿಗಳಿಗೆ ಕಾನೂನು ಪ್ರಕಾರ ತಕ್ಕ ಶಾಸ್ತಿ ಆಗುವ ತನಕ ಹೋರಾಟ ನಿಲ್ಲದು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ ಹೇಳಿದರು.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ ಪಂಚಾಯತ್ ಆಡಳಿತವು ರೈತ ವಿರೋಧಿ ಆಡಳಿತ ನಡೆಸುತ್ತಾ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಭ್ರಷ್ಟರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಉಳ್ಳಾಲ ಘಟಕದ ವತಿಯಿಂದ ಮುನ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಶನಿವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರೈತರು ಒಗ್ಗಟ್ಟಾಗಿ ಜಾಗೃತರಾಬೇಕು. ಪರಿಸ್ಥಿತಿ ಹೇಗಿದೆ ಎಂದರೆ ಈ ಭ್ರಷ್ಟರಿಂದಾಗಿ ನಮ್ಮ ಭೂಮಿಯನ್ನು ಉಳಿಸಲು ನಾವು ಹೋರಾಟ ಮಾಡುವಂತಾಗಿದೆ ಎಂದರು. ಪಂಚಾಯತ್ ಅಧಿಕಾರಿಗಳಿಗೆ ಆರೋಗ್ಯ ಕೆಟ್ಟರೆ ಅವರ ಆಸ್ಪತ್ರೆ ಖರ್ಚನ್ನು ಸರಕಾರ ಭರಿಸುತ್ತದೆ, ಆದರೆ ದೇಶದ ಜನತೆಯ ಹೊಟ್ಟೆ ತುಂಬಿಸುವ ರೈತನ ಗೋಳನ್ನು ಯಾರಲ್ಲಿ ಹೇಳೋದು ಎಂದು ಪ್ರಶ್ನಿಸಿದರು.

ರೈತರ ಕುಮ್ಕಿ ಜಾಗದ ಕುರಿತಾದ ನೂತನ ಕಾನೂನು ಶೀಘ್ರದಲ್ಲೇ ಜಾರಿಗೆ ಬರಲಿದೆ. ಕುಮ್ಕಿ ಹಕ್ಕು ಇತ್ಯರ್ಥವಾಗುವುದಕ್ಕೆ ಮುನ್ನವೇ ಸರಕಾರಿ ಜಮೀನು ಎಂದು ಅತಿಕ್ರಮಣ ಮಾಡಿರುವ ಮುನ್ನೂರು ಗ್ರಾಮ ಪಂಚಾಯತ್ ಆಡಳಿತದಲ್ಲಿ ಭ್ರಷ್ಟಾಚಾರಗೈದವರೆಲ್ಲರಿಗೂ ಶಿಕ್ಷೆ ಆಗಲಿದೆ ಎಂದರು.
ಕಿಸಾನ್ ಸಂಘ ಮುನ್ನೂರು ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಶೆಟ್ಟಿ, ಮುಖಂಡರಾದ ಪ್ರೇಮಚಂದ್ರ ಶೆಟ್ಟಿ, ಶಿವರಾಜ್ ಕಾವ, ಬಾಬು ಶ್ರೀಶಾಸ್ತಾ ಕಿನ್ಯ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
Mangalore Illegal sand mining in Ullal, farmers land being used for mining at Munnuru, farmers protest.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm